ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ವಿಧಿವಶ: ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ದಾವಣಗೆರೆ: ಧ್ರುವನಾರಾಯಣ್ ಒಡನಾಟ ನೆನೆದು ಭಾವುಕರಾದ ಸಿದ್ದರಾಮಯ್ಯ ಧ್ರುವನಾರಾಯಣ್ ಗೆ 61 ವರ್ಷ ಅಷ್ಟೇ ಆಗಿತ್ತು.  ಪಾದರಸದಂತೆ ಕೆಲಸ ಮಾಡುತ್ತಿದ್ದ ಅವರು ಅವರ ಸಾವು ನನಗೆ ಅಷ್ಟೇ ಅಲ್ಲ, ಕಾರ್ಯಕರ್ತರಿಗೆ, ನಾಯಕರಿಗೆ ತುಂಬಲಾರದ ನಷ್ಟ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಯ್ಯ ಹೇಳಿದ್ದಾರೆ.

ದಾವಣಗೆರೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಧಿ ಆಟದ ಮುಂದೆ ನಾವ್ಯಾರು ಆಡೋಕೆ ಆಗಲ್ಲ. ಕಾಂಗ್ರೆಸ್ ನಲ್ಲಿ ಎನ್‌ಎಸ್ ಯು ಐ ನಿಂದ ಧ್ರುವನಾರಾಯಣ ವಿಧಾನಸಭೆ ಹಾಗೂ ಸಂಸತ್ತಿಗೆ ಹೋದವರು.  ಎರಡು ಬಾರಿ ಶಾಸಕ,ಎರಡು ಸಲ ಲೋಕಸಭಾ ಸದಸ್ಯರಾಗಿ ಕೆಲಸ ಮಾಡಿದ್ದರು.

ಸಂಸತ್ತಿನಲ್ಲಿ ಕೆಲವೇ ಲೋಕಸಭಾ ಸದಸ್ಯರಿಲ್ಲ ಇವರೂ ಒಬ್ಬರಾಗಿದ್ದರು. ಅವರನ್ನು  ನಾವು ನಂಬರ್ ಒನ್ ಲೋಕಸಭಾ ಸದಸ್ಯ ಅಂತ ಕರೆಯುತ್ತಿದ್ದೆವು. ದಣಿವರಿಯದಂತೆ ಧ್ರುವನಾರಾಯಣ್ ಕೆಲಸ ಮಾಡುತ್ತಿದ್ದರು ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.

ಚುನಾವಣೆ ಸಂದರ್ಭದಲ್ಲಿ ರಾಜ್ಯಾದ್ಯಂತ ತೊಡಗಿಸಿಕೊಂಡಿದ್ದರು. ಅಭ್ಯರ್ಥಿ ಆಯ್ಕೆಯಲ್ಲೂ ತೊಡಗಿಸಿಕೊಂಡಿದ್ದರು.  ಮೈಸೂರು ಭಾಗದಿಂದ ಬಂದಂತ ಪ್ರಬಲ ದಲಿತ ನಾಯಕ ಅವರಾಗಿದ್ದರು.  ಅವರಿಗೆ ಭಾರವಾದ ಮನಸ್ಸಿನಿಂದ ಸಂತಾಪ ಸೂಚಿಸುತ್ತೇನೆ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ .  ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲದೆ ಇಡಿ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಸಿದ್ಧರಾಮಯ್ಯ ಸಂತಾಪ ವ್ಯಕ್ತಪಡಿಸಿದರು

Leave a Reply

Your email address will not be published. Required fields are marked *

error: Content is protected !!