ಪ್ರವಾಹ ಮುನ್ನೆಚ್ಚರಿಕೆ ಸೂಚನೆ.! ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಮನವಿ.!
![](https://garudavoice.com/wp-content/uploads/2021/10/IMG-20211026-WA0088.jpg)
ದಾವಣಗೆರೆ: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಮುನ್ನೆಚ್ಚರಿಕೆ ಸೂಚನೆ ಇರುವ ಕಾರಣ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಸುಮಾರು 20 ಸಾವಿರ ಕ್ಯೂಸೆಕ್ಸ್ ನೀರನ್ನು ಕೃಷ್ಣರಾಜಸಾಗರ ಜಲಾಶಯದಿಂದ ಕಾವೇರಿ ನದಿಗೆ ಹರಿಸುವ ಕಾರಣ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕೃರಾಸಾಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಸೂಚನೆ ನೀಡಿದ್ದಾರೆ.
ಕೃಷ್ಣರಾಜ ಸಾಗರದಿಂದ ಹೆಚ್ಚಿನ ಪ್ರಮಾಣದ ನೀರು ಬಿಡುವುದರಿಂದ ಕಾವೇರಿ ನದಿಯ ನೀರಿನ ಪ್ರಮಾಣ ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ತಿಳಿಸಲಾಗಿದೆ.