Lok sabha election; ಲೋಕಸಭಾ ಕ್ಷೇತ್ರ ಆಕಾಂಕ್ಷಿ ಟಿ.ಜಿ ರವಿಕುಮಾರ್, ಬಿವೈ ವಿಜಯೇಂದ್ರ ಭೇಟಿ

ಬೆಂಗಳೂರು, ಅ.11: ದಾವಣಗೆರೆ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಗುರುಸಿದ್ದನಗೌಡ ಹಾಗೂ ವೈದ್ಯಕೀಯ ಪ್ರಕೋಷ್ಠ ರಾಜ್ಯ ಸಹ ಸಂಚಾಲಕ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ  ಪ್ರಬಲ ಆಕಾಂಕ್ಷಿ ಟಿ.ಜಿ ರವಿಕುಮಾರ್ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿದರು.

ಈ ವೇಳೆ ಮುಂಬರುವ 2024ರ ಲೋಕಸಭಾ ಚುನಾವಣೆ (Lok sabha election) ಕುರಿತು ಚರ್ಚಿಸಲಾಯಿತು ಹಾಗೂ ದಾವಣಗೆರೆ ಜಿಲ್ಲೆಯ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಕೂಲಂಕುಷವಾಗಿ ತಿಳಿಸಲಾಯಿತು.

hd kumaraswamy; ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ ಬರ್ಬಾದ್ ಮಾಡಲಿದೆ ಕಾಂಗ್ರೆಸ್: ಹೆಚ್‌ಡಿಕೆ

ಈ ಒಂದು ಸಂದರ್ಭದಲ್ಲಿ ಬಿಜೆಪಿ ಮುಖಂಡರುಗಳಾದ ಬಾಬಣ್ಣ ದಿನೇಶ್ ಶಿವರಾಜ್ ನಾಗರಾಜ್ ಸ್ವಾಮಿ ಭರತ್ ಪಾಟೀಲ್ ಆತ್ಮ ಪಾಟೇಲ್ ಅರವಿಂದ್ ಕೊಂಡಾಪುರ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!