ಮಾಡಾಳ್ ಗ್ರಾಮದ ಶಾಸಕರ ಮನೆಯಲ್ಲಿ ಲೋಕಾಯುಕ್ತರಿಂದ ಶೋಧ

ಮಾಡಾಳ್ ಗ್ರಾಮದ ಶಾಸಕರ ಮನೆಯಲ್ಲಿ ಲೋಕಾಯುಕ್ತರಿಂದ ಶೋಧ

ಚನ್ನಗಿರಿ: ಲೋಕಾಯುಕ್ತ ಅಧಿಕಾರಿಗಳು ಗುರುವಾರ ತಾಲ್ಲೂಕಿನ ಚನ್ನೇಶಪು (ಮಾಡಾಳ್) ಗ್ರಾಮದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಶೋಧ ನಡೆಸಿದ್ದಾರೆ.

ಗುರುವಾರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲೂಎಸ್ಎಸ್ ಇಲಾಖೆಯ ಮುಖ್ಯ ಲೆಕ್ಕ ಪರಿಶೋಧಕ ಪ್ರಶಾಂತ್ ಪ್ರಕರಣ ಸಂಬಂಧ ಅಧಿಕಾರಿಗಳ ದಾಳಿ ಮುಂದುವರೆದಿದೆ.

ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಅಧಿಕಾರಿಗಳು ಇಡೀ ಮನೆಯನ್ನು ಶೋಧ ಮಾಡಿದರು. 4 ಬ್ಯಾಗ್‌ಗಳಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಸಂಗ್ರಹಿಸಿದರು.

ಶೋಧ ಸಮಯದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಅವರ ಪತ್ನಿ ಲೀಲಾವತಿ ವಿರೂಪಾಕ್ಷಪ್ಪ ಹಾಗೂ ಎರಡನೇ ಪುತ್ರ ಪ್ರವೀಣ್ (ರಾಜು) ಮನೆಯಲ್ಲಿ ಇದ್ದರು.

ಬೆಂಗಳೂರಿನ ಕೆಎಸ್‌ಡಿಎಲ್ ಕಚೇರಿಯಲ್ಲಿ ಬುಧವಾರ ಟೆಂಡರ್‌ಗೆ ಸಂಬಂಧಪಟ್ಟಂತೆ ಟೆಂಡರ್‌ದಾರನಿಂದ 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!