ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಎದುರೇ ಕೈ ಕೈ ಮಿಲಾಯಿಸಿದ ಗ್ರಾಮಸ್ಥರು

ಮಂಡ್ಯ: ಸಂಸದೆ ಸುಮಲತಾ ಬಿ ಗೌಡಗೆರೆ ಗ್ರಾಮಕ್ಕೆ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ
ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ವೇದಿಕೆಗೆ ಯಾವುದೇ ರಾಜಕೀಯ ಮುಖಂಡರನ್ನು ಹತ್ತಿಸಲು ಇಲ್ಲ ಎಂದು ಮೊದಲೇ ತೀರ್ಮಾನಿಸಲಾಗಿತ್ತು. ಇದರ ನಡುವೆ ಕೆಲ ಗ್ರಾಮಸ್ಥರು ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದಾರೆ. ಇದು ಕೆಲ ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ಅಸಮಾಧಾನಗೊಂಡ ಗ್ರಾಮಸ್ಥರು ಯಾಕೆ ಸುಮಲತಾರನ್ನು ವೇದಿಕೆಗೆ ಹತ್ತಿಸುತ್ತೀರಾ ಎಂದು ಜಗಳ ಆರಂಭಿಸಿದ್ದಾರೆ. ಈ ಸಂದರ್ಭ ಪ್ರಶ್ನೆ ಮಾಡಿದವರ ವಿರುದ್ಧ ಸುಮಲತಾ ಬೆಂಬಲಿಗರಿಂದ ಅಸಮಾಧಾನಗೊಂಡಿದ್ದಾರೆ. ಕೊನೆಗೆ ಎರಡೂ ಗುಂಪುಗಳು ಕೈಕೈ ಮಿಲಾಯಿಸಿಕೊಂಡಿವೆ ವೇದಿಕೆ ಏರುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ವಿಚಾರವಾಗಿ ಮಂಡ್ಯ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ಸಂಸದೆ ಸುಮಲತಾ ಪ್ರತಿಕ್ರಿಯಿಸಿದ್ದು, ಸುಮಲತಾ ಬಂದರೆ ನೋಡುವ ಆಸೆಯಿಂದ ಜನ ಸೇರುತ್ತಾರೆ. ಕೆಲವರು ಪ್ರಚಾರ ತೆಗೆದುಕೊಳ್ಳುವ ದುರಾಸೆಯಿಂದ ಈ ರೀತಿ ಮಾಡುತ್ತಾರೆ ಎಂದು ಹೇಳಿದ್ದಾರೆ.. ಬಿ.ಗೌಡಗೆರೆ ಗ್ರಾಮದ ಮಹದೇಶ್ವರ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ವೇದಿಕೆ ಏರುವ ವಿಚಾರವಾಗಿ ಗ್ರಾಮಸ್ಥರು ಕೈ ಕೈ ಮಿಲಾಯಿಸಿ ಹೊಡೆದಾಡುಕೊಳ್ಳುವ ಹಂತಕ್ಕೆ ಹೋಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!