ವೀರಶೈವ ಮಹಾಸಭಾದಿಂದ ಮಂಗಳಗೌರಿ ವ್ರತ

ವೀರಶೈವ ಮಹಾಸಭಾದಿಂದ ಮಂಗಳಗೌರಿ ವ್ರತ

ದಾವಣಗೆರೆ: ವೀರಶೈವ ಮಹಾಸಭಾದ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಂಗಳಗೌರಿ ವ್ರತವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆಯ ರೇಣುಕಾ ಮಂದಿರದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಮತಿ ಶುಭ ಐನಳ್ಳಿ ಅವರ ನೇತೃತ್ವದಲ್ಲಿ ನಡೆಯಿತು.

 

ಈ ಕಾರ‍್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ|| ಶಾಮನೂರು ಶಿವಶಂಕರಪ್ಪನವರು, ಉದ್ಯಮಿ ಎಸ್.ಎಸ್.ಗಣೇಶ್ ಮತ್ತವರ ಶ್ರೀಮತಿ ರೇಖಾ ಗಣೇಶ್, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ್, ವಕೀಲರಾದ ಪ್ರಕಾಶ್ ಪಾಟೀಲ್, ಬಿ.ಜೆ.ರಮೇಶ್, ಕೊರಟಗೆರೆ ಶಿವಕುಮಾರ್ ಮತ್ತಿತರರು ಭಾಗವಹಿಸಿ ಪೂಜೆ ಸಲ್ಲಿಸಿದರು.

ವೀರಶೈವ ಮಹಾಸಭಾದಿಂದ ಮಂಗಳಗೌರಿ ವ್ರತ

ಈ ಸಂದರ್ಭದಲ್ಲಿ ವೀರಶೈವ ಮಹಾಸಭಾದ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!