ರಾಜ್ಯ ಸುದ್ದಿ

Media awards; ಆ.27ಕ್ಕೆ ಮಾಧ್ಯಮ ದಿನಾಚರಣೆ; ಮಾಧ್ಯಮ ಪ್ರಶಸ್ತಿಗೆ 9 ಜನ ಪತ್ರಕರ್ತರ ಆಯ್ಕೆ

ದಾವಣಗೆರೆ, ಆ.22: ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ವತಿಯಿಂದ ಮಾಧ್ಯಮ ದಿನಾಚರಣೆ ಮತ್ತು ಮಾಧ್ಯಮ ಪ್ರಶಸ್ತಿ (Media awards) ಪ್ರದಾನ ಸಮಾರಂಭ ಆ. 27ರಂದು ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ.

ಪ್ರತಿವರ್ಷದಂತೆ  ಮಾಧ್ಯಮ ದಿನಾಚರಣೆ ಅಂಗವಾಗಿ ಕೊಡಮಾಡಲಾಗುವ ಮಾಧ್ಯಮ ಪ್ರಶಸ್ತಿಗೆ ಈ ಬಾರಿ ಒಂಭತ್ತು ಜನ ಪತ್ರಕರ್ತರು ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪತ್ರಕರ್ತರ ಸಂಘದಿಂದ ಸುರೇಶ್ ಬಾಬುಗೆ “ಮಾಧ್ಯಮ ಮಾಣಿಕ್ಯ” ಪ್ರಶಸ್ತಿ

ಈ ಬಾರಿ ಪ್ರಶಸ್ತಿ ನೀಡಲು ಸಮಿತಿ ರಚಿಸಲಾಗಿತ್ತು. ಅದರಂತೆ ಸಮಿತಿಯು ಸೋಮವಾರ ಸಭೆ ನಡೆಸಿ ಒಂಭತ್ತು ಜನ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಭಾರತಿ ಸಂಪಾದಕ ಮಲ್ಲಿಕಾರ್ಜುನ ಕಬ್ಬೂರ್, ವಿಜಯವಾಣಿಯ ಸ್ಥಾನಿಕ ಸಂಪಾದಕ ಎಂ.ಬಿ. ನವೀನ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ, ವಾರ್ತಾ ವಿಹಾರ ಸುದ್ದಿ ಸಂಪಾದಕ ಎಂ.ವೈ. ಸತೀಶ್. ದಾವಣಗೆರೆ ಕನ್ನಡಿಗ ಸಂಪಾದಕ ಆರ್. ರವಿ, ಜನತಾವಾಣಿ ಹಿರಿಯ ವರದಿಗಾರ ಎನ್.ವಿ. ಶ್ರೀನಿವಾಸ, ನ್ಯೂಸ್ 18 ಕನ್ನಡ ಸುದ್ದಿವಾಹಿನಿ ಜಿಲ್ಲಾ ವರದಿಗಾರ ಎ.ಪಿ. ಸಂಜಯ್, ರಾಜ್ ನ್ಯೂಸ್ ವರದಿಗಾರ ರಾಮಪ್ರಸಾದ್ ಹಾಗೂ ಸುವರ್ಣ ಸುದ್ದಿ ವಾಹಿನಿಯ ಕ್ಯಾಮೆರಾಮೆನ್ ಕಿರಣಕುಮಾರ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಯ್ಕೆಗೊಂಡವರಿಗೆ ಮಾಧ್ಯಮ ದಿನಾಚರಣೆಯ ಕಾರ್ಯಕ್ರಮದಲ್ಲಿ ನಗದು ಮತ್ತು ಪ್ರಶಸ್ತಿಯನ್ನು ಗಣ್ಯರಿಂದ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷರಾದ ಕೆ. ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಸಿ. ವರದರಾಜ್, ಖಜಾಂಚಿ ಮಧು ನಾಗರಾಜ್ ಕುಂದುವಾಡ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top