minister; ಕಾಂಗ್ರೆಸ್ ಶಾಸಕರಿಗೆ ಸಚಿವರ ಭೇಟಿಗೆ ಅವಕಾಶ ಸಿಗ್ತಿಲ್ಲ, ರೇಣುಕಾಚಾರ್ಯಗೆ ಅವಕಾಶ ಸಿಕ್ಕಿದೆ.!

ಚನ್ನಗಿರಿ; minister ಇತ್ತೀಚಿಗೆ ಹೊನ್ನಾಳಿ ಮಾಜಿ ಶಾಸಕರಾದ ರೇಣುಕಾಚಾರ್ಯ ಕಾಂಗ್ರೆಸ್ ಸಚಿವರನ್ನ ಭೇಟಿ ಮಾಡುತ್ತಿದ್ದು, ಸ್ಥಳೀಯ ನಿಷ್ಠಾವಂತ ಕಾರ್ಯಕರ್ತರಿಗೆ ಗೊಂದಲ ಉಂಟಾಗುತ್ತಿದೆ ಎಂದು ಚನ್ನಗಿರಿ ಶಾಸಕರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು.
ಪಟ್ಟಣದಲ್ಲಿ ಮಾತನಾಡಿದ ಅವರು ರೇಣುಕಾಚಾರ್ಯ ಪ್ರಚಾರ ಪ್ರಿಯರು, ಅಧಿಕಾರ ಇರಲಿ ಬಿಡಲಿ ಅವರಿಗೆ ಪ್ರಚಾರ ಬೇಕು ಹೀಗಾಗಿ ಸಚಿವರ ಭೇಟಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ  ಫೋಟೋ ಹಾಕಿಕೊಳ್ಳುತ್ತಿದ್ದಾರೆ. ಕ್ಷೇತ್ರದ ಸಮಸ್ಯೆಗಳ ನೆಪದಲ್ಲಿ ಸಚಿವರುಗಳನ್ನ ಭೇಟಿ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರನ್ನೇ ಆಯ್ಕೆ ಮಾಡದ ಬಿಜೆಪಿ ಪಕ್ಷ ನಾವಿಕನಿಲ್ಲದ ದೋಣಿಯಾಗಿದ್ದು  ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳಲು ರೇಣುಕಾಚಾರ್ಯ ಮುಂದಾಗುತ್ತಿದ್ದಾರೆ. ಇಂಥವರಿಗೆ ಕಾಂಗ್ರೆಸ್ ಸಚಿವರು ಪ್ರಾಮುಖ್ಯತೆ ನೀಡಬಾರದು.
ಕಾಂಗ್ರೆಸ್ ಶಾಸಕರಿಗೆ ಸಚಿವರನ್ನ ಭೇಟಿ ಮಾಡಲು ಅವಕಾಶ ಸಿಗುತ್ತಿಲ್ಲ, ಕೊನೆ ಪಕ್ಷ ಸಚಿವರುಗಳಿಗೆ ಫೋನ್ ಕರೆ ಮಾಡಿದರೂ ರೆಸ್ಪಾನ್ಸ್ ಮಾಡುತ್ತಿಲ್ಲ. ಆದರೆ ವಿರೋಧ ಪಕ್ಷದ ಮಾಜಿ ಶಾಸಕರಿಗೆ ಸಚಿವರ ಭೇಟಿಗೆ ಅವಕಾಶ ಸಿಗುತ್ತಿದೆ.  ಸಚಿವರನ್ನ ಭೇಟಿ ಮಾಡಿರುವ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪ್ರಚಾರ ಪಡೆಯುತ್ತಿರುವುದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಗೆ ಗೊಂದಲ ಉಂಟಾಗಿದೆ. ಇಂಥವರಿಗೆ ಕಾಂಗ್ರೆಸ್ ನಾಯಕರು ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ ಎಂದು ಶಾಸಕರಾದ ಬಸವರಾಜು ವಿ ಶಿವಗಂಗಾ ತಿಳಿಸಿದರು.
ರೇಣುಕಾಚಾರ್ಯಗೆ ಹೊನ್ನಾಳಿಯಲ್ಲಿ ರಾಜಕೀಯ ಜೀವನ ನೀಡಿ, ಅಧಿಕಾರ ಕೊಟ್ಟು ಬೆಳಸಿದಂತವರು ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು, ಆದರೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಜನಾರ್ಧನ್ ರೆಡ್ಡಿ ಸೇರಿದಂತೆ ಹಲವು ಶಾಸಕರೊಂದಿಗೆ ರೆಸಾರ್ಟ್ ರಾಜಕೀಯ ಮಾಡಿ ಅಧಿಕಾರದಿಂದ ಕೆಳಗಿಳಿಸಿದ್ದು ಇದೇ ರೇಣುಕಾಚಾರ್ಯ ಅವರು. ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ,  ಇದೀಗ ಅಧಿಕಾರ ಇಲ್ಲದ ಕಾರಣ ಪ್ರಚಾರಕ್ಕಾಗಿ ಕಾಂಗ್ರೆಸ್ ಸಚಿವರ ಭೇಟಿ ಮಾಡುವ ನಾಟಕ ಶುರು ಮಾಡಿದ್ದಾರೆ. ಕಳೆದ ಬಾರಿ ಅವರದ್ದೇ ಸರ್ಕಾರವಿದ್ದರೂ ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ, ಹೀಗಾಗಿ ಹೊನ್ನಾಳಿ ಜನರು ತಿರಸ್ಕಾರ ಮಾಡಿದ್ದು, ಇತ್ತೀಚೆಗೆ ಗ್ಯಾರಂಟಿಗಳ ವಿರುದ್ಧ ಅಭಿಯಾನ ಮಾಡಿದಂತ ರೇಣುಕಾಚಾರ್ಯಗೆ ಕಾಂಗ್ರೆಸ್ ನಾಯಕರು ಇಂಥವರನ್ನ ಹತ್ತಿರ ಕ್ಕೂ ಬಿಟ್ಟುಕೊಳ್ಳಬಾರದು. ಲೋಕಸಭಾ ಚುನಾವಣೆ ಹತ್ತಿರವಿದ್ದು ಕಾಂಗ್ರೆಸ್ ಕಾರ್ಯಕರ್ತರಿಗೆ ಇಂಥ ವಿಚಾರ ಗೊಂದಲಕ್ಕೆ ಕಾರಣವಾಗುತ್ತಿದೆ. ಇಂಥವರಿಗೆ ಕಾಂಗ್ರೆಸ್ ಹೆಚ್ಚು ಪ್ರಾಮುಖ್ಯತೆ ನೀಡುವ ಅವಶ್ಯಕತೆ ಇಲ್ಲ ಶಾಸಕರಾದ ಬಸವರಾಜು ವಿ ಶಿವಗಂಗಾ ಹೇಳಿದರು.

Leave a Reply

Your email address will not be published. Required fields are marked *

error: Content is protected !!