ಹೆದರದಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವ ಗೋಪಾಲಯ್ಯ ಉಕ್ರೇನ್‌ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳಿಗೆ ವಿಡಿಯೋ ಕರೆ ಮೂಲಕ ಮಾತನಾಡಿದ ಸಚಿವರು

2

ಬೆಂಗಳೂರು: ಯುದ್ಧ ಪೀಡಿತ ನಾಡು ಉಕ್ರೇನ್ ದೇಶದಲ್ಲಿರುವ ರಾಜ್ಯದ ವಿದ್ಯಾರ್ಥಿಗಳ ಜೊತೆ ಅಬಕಾರಿ ಸಚಿವ ಕೆ. ಗೋಪಾಲಯ್ಯ ದೂರವಾಣಿ ಕರೆ ಮೂಲಕ ಮಾತನಾಡಿ ಹೆದರದಂತೆ ಧೈರ್ಯ ತುಂಬಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ರೋಹಿತ್, ಬೆಂಗಳೂರಿನ ರಕ್ಷಿತ್, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳ ಜೊತೆ ಯೋಗಕ್ಷೇಮ ವಿಚಾರಿಸಿದ್ದಾರೆ. ವಿದ್ಯಾರ್ಥಿಗಳ ಜೊತೆ ಮಾತನಾಡಿದ ಸಚಿವರು, ಯಾವುದೇ ಕಾರಣಕ್ಕೂ ಧೈರ್ಯ ಕಳೆದುಕೊಳ್ಳಬಾರದು. ಆತ್ಮಸ್ಥೈರ್ಯದಿಂದ ಪರಿಸ್ಥಿತಿಯನ್ನು ಎದುರಿಸಿ. ನಿಮ್ಮ ತಂದೆತಾಯಿಗಳು, ಸಹೋದರ-ಸಹೋದರಿಯರು ಆತಂಕದಲ್ಲಿರುತ್ತಾರೆ. ನಿಮ್ಮ ಕುಟುಂಬ ವರ್ಗದವರಿಗೆ ಕರೆ ಮಾಡಿ ತಾವು ಸುರಕ್ಷಿತವಾಗಿರುವುದಾಗಿ ತಿಳಿಸುವಂತೆ ಮನವಿ ಮಾಡಿದರು.

ನೀವು ಧೈರ್ಯ ಕಳೆದುಕೊಂಡರೆ ಪೋಷಕರು ಆತಂಕಕ್ಕೆ ಒಳಗಾಗುತ್ತಾರೆ. ಪ್ರತಿದಿನ ದೂರವಾಣಿ ಕರೆ ಮಾಡಿ ಅಲ್ಲಿನ ವಸ್ತುಸ್ಥಿತಿಯನ್ನು ತಿಳಿಸಿ. ನಿಮ್ಮನ್ನು ಆದಷ್ಟು ಬೇಗ ತಾಯ್ನಾಡಿಗೆ ಕರೆ ತರಲು ಸರ್ಕಾರ ತಯಾರಿ ಮಾಡಿಕೊಂಡಿದೆ ಎಂದು ಧೈರ್ಯ ತುಂಬಿದರು. ಈಗಾಗಲೇ ಅನೇಕ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲಾಗಿದೆ. ಪ್ರತಿಯೊಬ್ಬರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಬೇಕೆಂದು ಖುದ್ದು ಪ್ರಧಾನಿ ನರೇಂದ್ರಮೋದಿ ಅವರೇ ಸಚಿವರಿಗೆ ಸೂಚನೆ ಕೊಟ್ಟಿದ್ದಾರೆ. ಉಕ್ರೇನ್ನಿಂದ ಬರುವವರಿಗೆ ಉಚಿತವಾಗಿ ವಿಮಾನ ಪ್ರಯಾಣ, ವಿಮಾನ ನಿಲ್ದಾಣದಿಂದ ಮನೆಯವರೆಗೂ ತಲುಪಿಸಲು ಉಚಿತವಾಗಿ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಿದೆ. ಯಾವುದೇ ಬೆಲೆ ತೆತ್ತಾದರೂ ಸುರಕ್ಷಿತವಾಗಿ ನಿಮ್ಮನ್ನು ಕರೆತರುತ್ತೇವೆ. ನೀವು ಆತಂಕಕ್ಕೆ ಒಳಗಾಗಬಾರದು ಎಂದು ಗೋಪಾಲಯ್ಯ ಸಲಹೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!