Minority; ಅಲ್ಪಸಂಖ್ಯಾತರ ಸಮುದಾಯಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಆ. 29: ಪ್ರಸಕ್ತ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (Minority) ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯಗಳಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ (application) ಆಹ್ವಾನಿಸಲಾಗಿದೆ.

ಶ್ರಮ ಶಕ್ತಿ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ), ಗಂಗಾ ಕಲ್ಯಾಣ ಯೋಜನೆ, ಟ್ಯಾಕ್ಸಿ, ಗೂಡ್ಸ್, ಆಟೋರಿಕ್ಷ ವಾಹನ ಖರೀದಿಸಲು ಸಹಾಯಧನ ಯೋಜನೆ, ವೃತ್ತಿಪ್ರೋತ್ಸಾಹ ಯೋಜನೆ, ಅರಿವು ಸಿಇಟಿ, ನೀಟ್(ಅಇಖಿ/ಓಇಇಖಿ) ವಿದ್ಯಾಭ್ಯಾಸ ಸಾಲ ಯೋಜನೆ ನವೀಕರಣ(ರಿನ್ಯೂವಲ್), ಸಮುದಾಯ ಆಧಾರಿತ ತರಬೇತಿ ಯೋಜನೆಗಳಡಿ ಸಾಲ ಸೌಲಭ್ಯವನ್ನು ನೀಡಲಾಗುವುದು.

Gruha Lakshmi Scheme; ಆ.30 ರಂದು ಜಿಲ್ಲೆಯಾದ್ಯಂತ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಅರ್ಹ ಮತ್ತು ಆಸಕ್ತರು ಸೆಪ್ಟೆಂಬರ್ 25ರೊಳಗಾಗಿ ಅರ್ಜಿ ಸಲ್ಲಿಸಿ ಅರ್ಜಿ ಪ್ರಿಂಟ್  ಪಡೆದು, ಅಗತ್ಯ ದಾಖಲೆಗಳೊಂದಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಜಿಲ್ಲಾ  ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಕುರುಬರ ಹಾಸ್ಟೇಲ್ ಕಟ್ಟಡ ಜಯದೇವ ಸರ್ಕಲ್ ದೂ.ಸಂ, 08192 232349 ಗೆ ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!