ಔರಂಗಾಬಾದ್‌ನಲ್ಲಿ ಗುಂಪು ಘರ್ಷಣೆ: ಪೊಲೀಸ್ ವಾಹನಗಳಿಗೆ ಬೆಂಕಿ

ಔರಂಗಾಬಾದ್‌ನಲ್ಲಿ ಗುಂಪು ಘರ್ಷಣೆ: ಪೊಲೀಸ್ ವಾಹನಗಳಿಗೆ ಬೆಂಕಿ

ನವದೆಹಲಿ: ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಿಡಿಗೇಡಿಗಳು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದಿದೆ.
ಬುಧವಾರ ಸಂಜೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಕ್ರಮೇಣ ಹಿಂಸಾತ್ಮಕ ಸ್ವರೂಪ ಪಡೆದುಕೊಡಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಜತೆಗೆ ಸ್ಥಳದಲ್ಲಿದ್ದ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಸಂಘರ್ಷಣೆಯಲ್ಲಿ 500 ರಿಂದ 600 ಮಂದಿ ಯುವಕರು ಭಾಗಿಯಾಗಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ. ಪ್ರಸಿದ್ಧ ರಾಮ ಮಂದಿರವಿರುವ ಕಿರಾದ್‌ಪುರದಲ್ಲಿ ಈ ಘಟನೆ ನಡೆದಿದೆ. ಕೋಮು ಸಂಘರ್ಷ ನಡೆಯುವುದನ್ನು ತಡೆಯುವ ಉದ್ದೇಶದಿಂದ ಔರಂಗಾಬಾದ್‌ನಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಕಮಿಷನರ್ ನಿಖಿಲ್ ಗುಪ್ತಾ ಹೇಳಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!