ಭಾರತ್ ಜೋಡೋ ಯಾತ್ರೆಯಲ್ಲಿಯೇ ಮೃತಪಟ್ಟ ಸಂಸದ: ಒಂದು ದಿನ ಯಾತ್ರೆ ಸ್ಥಗಿತ

ಚಂಡೀಗಢ: ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಭಾರತ್ ಜೋಡೋ ಪಾದಯಾತ್ರೆ ವೇಳೆಯೇ ನಿಧನ ಹೊಂದಿದ ಕಾರಣ, ಅವರ ಗೌರವಾರ್ಥವಾಗಿ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ಶನಿವಾರ ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಿದೆ.

ಪಂಜಾಬ್‌ನ ಜಲಂಧರ್ ಕ್ಷೇತ್ರದ ಕಾಂಗ್ರೆಸ್‌ ಸಂಸದ ಸಂತೋಖ್‌ ಚೌಧರಿ ಅವರು ಶನಿವಾರ ಭಾರತ್ ಜೋಡೋ ಯಾತ್ರೆಯ ವೇಳೆ ಕುಸಿದುಬಿದ್ದರು. ನಂತರ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು
ಇಂದು ಬೆಳಗ್ಗೆ ನಿಧನರಾದ ಜಲಂಧರ್‌ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರಿಗೆ ಗೌರವ ಸೂಚಕವಾಗಿ ಭಾರತ್ ಜೋಡೋ ಯಾತ್ರೆಯನ್ನು 24 ಗಂಟೆಗಳ ಕಾಲ ಸ್ಥಗಿತಗೊಳಿಸಲಾಗುವುದು.

ನಾಳೆ ಮಧ್ಯಾಹ್ನ ಜಲಂಧರ್‌ನ ಖಾಲ್ಸಾ ಕಾಲೇಜು ಮೈದಾನದಿಂದ ಯಾತ್ರೆ ಪುನರಾರಂಭವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಸದ್ಯ ಯಾತ್ರೆಯು ಪಂಜಾಬ್‌ನಲ್ಲಿ ಸಾಗುತ್ತಿದೆ. ರಾಹುಲ್ ಗಾಂಧಿ ಅವರು ಜನವರಿ 15 ರಂದು ಜಲಂಧರ್‌ನಲ್ಲಿ ನಿಗದಿಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ. ಆ ಪತ್ರಿಕಾಗೋಷ್ಠಿ ಜ. 17ಕ್ಕೆ ಹೋಶಿಯಾರ್‌ಪುರದಲ್ಲಿ ನಿಗದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!