ಮುಸ್ಲಿಂ ಲೇಖಕರನ್ನು ಹಾವೇರಿ ಸಮ್ಮೇಳನದಲ್ಲಿ ಹೋರಗಿಟ್ಟ ಕಸಾಪ.!? ಕವಿಗೋಷ್ಟಿಯಿಂದ ಹಿಂದೆ ಸರಿದ ಚಾಂದ್ ಪಾಷ.!

Muslim writers were slaughtered in the Haveri conference.!? Chand Pasha withdrew from Kavi Goshti.

ಹಾವೇರಿ: ಹಾವೇರಿಯಲ್ಲಿ ಜನವರಿ 6 – 8 ರವರೆಗೆ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಸ್ಲಿಂ ಲೇಖಕರನ್ನು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಕಡೆಗಣಿಸಿಲಾಗಿದೆ ಎಂದು ಆರೋಪಿಸಿ ಸಮ್ಮೇಳನದ ಕವಿಗೋಷ್ಟಿಯಲ್ಲಿ ಭಾಗವಹಿಸುವುದಿಲ್ಲ ಎಂದು ಯುವ ಬರಹಗಾರ ಚಾಂದ್ ಪಾಷ ತಮ್ಮ ಫೇಸ್ ಬುಕ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮೂರನೇ ಕವಿಗೋಷ್ಟಿಯಲ್ಲಿ ಕವನ ವಾಚಿಸಲು ಚಾಂದ್ ಪಾಷ ಎನ್ ಎಸ್‌ ರವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಮ್ಮೇಳನದ ರೀತಿ ನೀತಿ, ಸಮ್ಮೇಳನಾಧ್ಯಕ್ಷರ ಹಿಂದಿ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳನ್ನು ಉಲ್ಲೇಖಿಸಿರುವ ಅವರು ಗೋಷ್ಠಿಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಸಮಸ್ತ ಕನ್ನಡಿಗರನ್ನು ಪ್ರತಿನಿಧಿಸುವ ಪ್ರಜ್ಞೆ. ಅದೊಂದು ಜಾತಿ, ಧರ್ಮವನ್ನು ಪ್ರತಿನಿಧಿಸುವ ಮತ್ತು ಧರ್ಮದ ವಿಶೇಷಣವನ್ನು ಹೊತ್ತು ಮೆರೆಸುವ ಧಾರ್ಮಿಕ ಕೇಂದ್ರವಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಪರಿಷತ್ ಸಂಪೂರ್ಣವಾಗಿ ಜಾತಿ ಮತ್ತು ಧರ್ಮ ಕೇಂದ್ರಿತ ಹಾಗೂ ಪುರುಷ ಪ್ರಧಾನತೆಯನ್ನೆ ಪ್ರತಿಪಾದಿಸುವ ಮನು ಸಂಸ್ಕೃತಿಯನ್ನು ಚಲಾವಣೆಗೆ ತರಲು ಹಾತೊರೆಯುತ್ತಿರುವುದು ದುರಂತವೇ ಸರಿ. ಮನುಷ್ಯ ಕೇಂದ್ರಿತ ಪ್ರಜ್ಞೆಯನ್ನು ಇಲ್ಲವಾಗಿಸಿ, ಸಮುದಾಯವೊಂದರ ಮೇಲಿನ ರಾಜಕೀಯ ಪ್ರೇರಿತ ದ್ವೇಷವನ್ನು ಇಮ್ಮಡಿಗೊಳಿಸುವ ಹಿಡನ್ ಅಜೆಂಡಾವನ್ನು ಇಟ್ಟುಕೊಂಡು ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು, “ಸರ್ವ ಜನಾಂಗದ ಶಾಂತಿಯ ತೋಟ”ಕ್ಕೆ ಬೆಂಕಿ ಹಚ್ಚಿದ ಹಾಗಿದೆ. ಹಾವೇರಿಯಂತಹ ಸಾಮರಸ್ಯ ಉಳ್ಳ ಸ್ಥಳದಲ್ಲಿ ನಡೆಯುವ ಸಮ್ಮೇಳನವು ದಲಿತ ಮತ್ತು ಮುಸ್ಲಿಂ ಸಮುದಾಯದ ಬರಹಗಾರನ್ನು ವ್ಯವಸ್ಥತವಾಗಿ ಹೊರಗಿಟ್ಟಿದ್ದು, ಉಡುಪಿ ಮಠದಿಂದ ಕನಕದಾಸನನ್ನು ಹೊರಗಿಟ್ಟ ಹಾಗೆಯೇ ಇದೆ.

ಕನ್ನಡ ಸಾಹಿತ್ಯಕ್ಕೆ ಜೀವ ವಿರೋಧಿತನ ಎಂದಿಗೂ ಅಂಟಿಕೊಂಡೆ ಇಲ್ಲ, ವಿಶ್ವಕ್ಕೆ ವಿಶ್ವಮಾನವತ್ವ ಸಂದೇಶ ಸಾರಿದೆ ಕುವೆಂಪು ನೆಲದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಅಲ್ಪಮಾನವತ್ವವನ್ನು ಪ್ರತಿಯೊಂದು ಕಾರ್ಯಕ್ರಮದಲಿ ಪರೋಕ್ಷವಾಗಿ ಪ್ರತಿಪಾದಿಸುತ್ತಲೇ ಇದೆ. ಇತ್ತೀಚಿನ ದಿನಗಳಲ್ಲಿ ವಿಪರೀತವಾಗಿರುವ ದಲಿತರ ಮೇಲಿನ ದೌರ್ಜನ್ಯ, ಸ್ತ್ರೀ ಶೋಷಣೆ, ಮುಸ್ಲಿಂ ಫೋಬಿಯವನ್ನು ಹಬ್ಬಿಸುತ್ತಿರುವುದು, ಸರ್ಕಾರಿ ಶಾಲೆಗಳ ಸ್ಥಿತಿ ಗತಿ…. ಹೀಗೆ ಅನೇಕ ಜ್ವಲಂತ ಸಮಸ್ಯೆಗಳಿದರೂ ಕೂಡ ಸಮ್ಮೇಳನದಲ್ಲಿ ಇದರ ಕುರಿತ ಒಂದು ಗೋಷ್ಠಿಯೂ ಇಲ್ಲದಿರುವುದು, ಸಾಹಿತ್ಯ ಪರಿಷತ್ತಿನ ಜಾಣಕುರುಡುತನಕ್ಕೆ ಸಾಕ್ಷಿಯಂತಿದೆ. ಇಂಥ ದುರಿತ ಕಾಲದಲ್ಲಿ ಸಾಮರಸ್ಯವನ್ನು ಹಬ್ಬಿಸಬೇಕೆ ಹೊರತು, ಅದನ್ನು ಇಲ್ಲವಾಗಿಸುವ ಸಾಹಿತ್ಯ ಸಮ್ಮೇಳವನ್ನು ಬಹಿಷ್ಕರಿಸಿಸುವುದು ಸಾಮಾಜಿಕ ಜವಾಬ್ದಾರಿ ಇರುವ ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ನಾನು ನಂಬುತ್ತೇನೆ. “ಹಿಂದಿ ಭಾರತದ ರಾಷ್ಟ್ರೀಯ ಭಾಷೆ” ಎಂದು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ದೊಡ್ಡರಂಗೇಗೌಡರು ಸಂದರ್ಶನದಲ್ಲಿ ಹೇಳಿದ ಮಾತಿದು. ಇಂಥ ಕನ್ನಡ ಭಾಷಾ ವಿರೋಧಿಯನ್ನು ಅಧ್ಯಕ್ಷ ಸ್ಥಾನದಲ್ಲಿರಿಸುವ ಸಮ್ಮೇಳನದಲ್ಲಿ ಆಹ್ವಾನಿತ ಕವಿಯಾಗಿರುವ ನಾನು ಖಂಡಿತವಾಗಿಯು ಕವಿತೆ ಓದಲಾರೆ, ಭಾಗವಹಿಸಿಲಾರೆ.
ಸಮುದಾಯವನ್ನು ದೂರವಿಟ್ಟ ಸಮ್ಮೇಳನದ ಸಂಭ್ರಮ ಸೂತಕದ ಹಾಗೆಯೇ ಇದೆ. ಅಷ್ಟಕ್ಕೂ ಷರೀಫನನ್ನು ಹೊರಗಿಟ್ಟಿದ್ದನ್ನೆ ಗುರು ಗೋವಿಂದ??
# ಚಾಂದ್ ಪಾಷ ಎನ್ ಎಸ್
ಬೆಂಗಳೂರು

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!