ನಂದಿನಿ ಹಾಲಿನ ಕೇಂದ್ರ ತೆರೆಯಲು ಸರ್ಕಾರದಿಂದ ಅನುಮತಿ, ನೂತನ ಆದೇಶದಲ್ಲಿ ಏನಿದೆ ಓದಿ👇

ದಾವಣಗೆರೆ: ಆದೇಶ ಸಂಖ್ಯೆ: ಕಂಇ 158 ಟಿಎನ್ಆರ್ 2020, ದಿನಾಂಕ:26.04.2021ರಲ್ಲಿ ಹೊರಡಿಸಲಾಗಿರುವ ಮಾರ್ಗಸೂಚಿಯಲ್ಲಿನ ಕ್ರಮ.ಸಂಖ್ಯೆ: 10(ಎ)ರಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನ ಹಾಲು ಮಾರಾಟ ಮಳಿಗೆಗಳು,
ಬೆಳಿಗ್ಗೆ 06:00ಗಂಟೆಯಿಂದ ರಾತ್ರಿ 08:00 ಗಂಟೆಯವರೆಗೆ ಮಾರಾಟ ಮಾಡಲು ನೂತನವಾಗಿ ಸೇರ್ಪಡೆ ಮಾಡಿ ಅನುಮತಿಸಿದೆ.
ಈ ಆದೇಶವನ್ನು ಮುಖ್ಯ ಆಯುಕ್ತರು, ಬಿಬಿಎಂಪಿ, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು,ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಗಳ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು
ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸತಕ್ಕದ್ದು.
ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ
ಕಾರ್ಯಕಾರಿ ಸಮಿತಿ ಸದಸ್ಯ ಕಾರ್ಯದರ್ಶಿಯಾದ
ಎನ್. ಮಂಜುನಾಥ ಪ್ರಸಾದ್, ಭಾ.ಆ.ಸೇ
ಸೇರ್ಪಡೆ ಮಾಡಿ ಆದೇಶಿಸಿದ್ದಾರೆ.