ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರ

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ವತಿಯಿಂದ ಎಂ.ಬಿ.ಎ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಒಳಪಡುವ ಕಾಲೇಜುಗಳ ಪ್ರಾಂಶುಪಾಲರಿಗೆ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಕುರಿತು ಒಂದು ದಿನದ ಕಾರ್ಯಗಾರವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವೆ ಪ್ರೊ. ಗಾಯಿತ್ರಿ ದೇವರಾಜ್ ಉದ್ಘಾಟಿಸಿದರು. ಪರೀಕ್ಷಾಂಗ ಕುಲಸಚಿವೆ ಪ್ರೊ.ಹೆಚ್.ಎಸ್. ಅನಿತಾ, ಕಾರ್ಯಕ್ರಮ ಸಂಯೋಜಕ ಅನೂಪ್ರಿತ್ತಿ, ಸಂಪನ್ಮೂಲ ವ್ಯಕ್ತಿಗಳಾದ ಡಾ.ದಿನೇಶ್ ಪಾಣಿಗ್ರಹಿ, ಡಾ.ಜಯಪ್ಪ, ಡಾ.ವೇಣುಗೋಪಾಲ್ ಜಾಲಿಹಾಳ್ ಇದ್ದಾರೆ.