19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಕ್ಸಲ್ ಕೊತ್ತಗೆರೆ‌ ಶಂಕರ ಅರೆಸ್ಟ್‌

ಪೊಲೀಸರ ಮೇಲೆ ದಾಳಿ ನಡೆಸಿ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಕ್ಸಲ್ ಕೊತ್ತಗೆರೆ‌ ಶಂಕರನನ್ನು ತುಮಕೂರು, ಬೆಂಗಳೂರು ಆಂತರಿಕ ಭದ್ರತಾ ವಿಭಾಗ ಮತ್ತು ಸಿ.ಐ. ತಂಡ ಬಂಧಿಸಿದೆ ಎಂದು ತುಮಕೂರು ಎಸ್ಪಿ ಅಶೋಕ್ ವೆಂಕಟ್ ತಿಳಿಸಿದ್ದಾರೆ.

ಬಂಧಿತ ನಕ್ಸಲ್‌ ಶಂಕರ, ಬೆಂಗಳೂರಿನ ಗೌರಿಪಾಳ್ಯದ ವೆಂಕಟಸ್ವಾಮಿ ಗಾರ್ಡನ್ ನಗರದಲ್ಲಿ ವಾಸವಿವಾಗಿದ್ದನು. ಬಿಬಿಎಂಪಿಯಲ್ಲಿ ಡ್ರೈವರ್ ಕೆಲಸ ಮಾಡುತಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಲಾಗಿದೆ.

ಏನಿದು ಪ್ರಕರಣ…………………..

2005 ಫೆ. ರಾತ್ರಿ‌10.30 ರ ವೇಳೆ ತುಮಕೂರು ಜಿಲ್ಲೆಯ ಪಾವಗಡದ ವೆಂಕಟಮ್ಮನಹಳ್ಳಿಯ ಪೊಲೀಸ್ ಕ್ಯಾಂಪ್ ಮೇಲೆ ಸುಮಾರು 300 ಜನ ಮಾವೋಯಿಸ್ಟ್ ನಕ್ಸಲೀಯರು ಬಂದೂಕು, ಬಾಂಬ್‌, ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ದಾಳಿ ನಡೆಸಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ 7 ಪೊಲೀಸರು, ಖಾಸಗಿ ಬಸ್‌ನ ಕ್ಲೀನರ್‌ ಹತ್ಯೆಯಾಗಿತ್ತು. ಜೊತೆಗೆ 5 ಮಂದಿ ಪೊಲೀಸ್ ಸಿಬ್ಬಂದಿಗಳು ಗಂಭೀರ ಗಾಯಗೊಂಡಿದ್ದರು.

ಹತ್ಯೆ ಬಳಿಕ ಕ್ಯಾಂಪ್‌ನಲ್ಲಿದ್ದ ಬಂದೂಕು, ಗುಂಡುಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ನಂತರ ತಲೆ ಮರೆಸಿಕೊಂಡಿದ್ದ 32 ಜನ ಆರೋಪಿಗಳ ಮೇಲೆ ಪಾವಗಡದ ಸಿಜೆ[ಜೆಡಿ] ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿತ್ತು. ಈ ಬಗ್ಗೆ ತಿರುಮಣಿ ಪೊಲೀಸ್ ಠಾಣಾ ಮೊನಂ: 07/2005, ಕಲಂ:143, 144, 147, 148, 307, 302, 396, 353, 120,121(ಬಿ),109, 332, 333 ರೆ/ವಿ 149 ಐಪಿಸಿ ಕಲಂ:3.4.5 ಸ್ಪೋಟಕ ನಿಯಂತ್ರಣ ಕಾಯ್ದೆ ಕಲಂ:25 ಶಸ್ತ್ರಾಸ್ತ್ರ ಅಧಿನಿಯಮ ಅಡಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!