ಅಕ್ಟೋಬರ್ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣಪ್ರಮಾಣದ ತರಗತಿ ಆರಂಭ: ಬಸವರಾಜ್ ಬೊಮ್ಮಾಯಿ

ಬೆಂಗಳೂರು : ಕೋವಿಡ್ 19 ಧೃಡ ಪ್ರಮಾಣ ಶೇಕಡ 0.66%ಕ್ಕೆ ಇಳಿದಿರುವುದರಿಂದ ಅಕ್ಟೋಬರ್ ಒಂದರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿ ವರಗಿನ ವಿದ್ಯಾರ್ಥಿಗಳಿಗೆ ಪೂರ್ಣಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.
ಶುಕ್ರವಾರ ಕೋವಿಡ್ 19 ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ. ಕೋವಿಡ್ ದೃಡ ಪ್ರಮಾಣದರ ಶೇಕಡಾ 1% ಗಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆನ ಶೇಕಡಾ 100%ರಷ್ಟು ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುವುದು.
ವಾರದ ಎರಡು ದಿನ ಶನಿವಾರ ಮತ್ತು ಭಾನುವಾರ ತರಗತಿಗಳ ಕೊಠಡಿಗಳಿಗೆ ಪ್ಯಾರಡೈಸ್ ಮಾಡಲಾಗುವುದು.
ಶೇಕಡ 1%ಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ಈಗಿರುವಂತೆ ದಿನ ಬಿಟ್ಟು ದಿನ ಅರ್ಧದಷ್ಟು ವಿದ್ಯಾರ್ಥಿಗಳಿಗೆ ಸರದಿಯ ಮೇಲೆ ತರಗತಿ ನಡೆಯಲಿದೆ ಎಂದರು