Panchapeetha: ಪಂಚಪೀಠ ಸ್ವಾಮೀಜಿಗಳ ಸಂಗಮಕ್ಕೆ ಸಾಕ್ಷಿಯಾಗಲಿದೆ ದಾವಣಗೆರೆ

IMG-20250629-WA0027

ದಾವಣಗೆರೆ: (Panchapeetha)  ದಾವಣಗೆರೆ ನಗರದಲ್ಲಿ 1 ಜುಲೈ 2025 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹಳೆ ಪಿ.ಬಿ. ರಸ್ತೆಯಲ್ಲಿರುವ ಶ್ರೀ ಶೈಲ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಆದಿ ಜಗದ್ಗುರು ಪಂಚಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನದ ಸಮಾವೇಶದ ಅಂಗವಾಗಿ ಪೂರ್ವಭಾವಿ ಸಭೆ ಸೇರಲಿದ್ದಾರೆ.

ಇತ್ತೀಚೆಗೆ ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪನವರು ಪಂಚಪೀಠದ ಎಲ್ಲಾ ಸ್ವಾಮೀಜಿಯವರು ಜೊತೆಯಾಗಬೇಕು ಅದಕ್ಕಾಗಿ ವೇದಿಕೆ ಸಿದ್ದಪಡಿಸಲು ಆಶಯ ವ್ಯಕ್ತಪಡಿಸಿದ್ದರು, ಅದರಂತೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ನೇತೃತ್ವದಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದ್ದು, ಸಮಾಜ ಬಾಂದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ  ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಇನ್ನುಳಿದ ಗಣ್ಯ ವ್ಯಕ್ತಿಗಳು ಆಗಮಸಲಿದ್ದು ಅದೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಜಗದ್ಗುರು ಪಂಚಾಚಾರ್ಯ ಮಂದಿರದ ಆಡಳಿತ ಮಂಡಳಿ ಹಾಗೂ ಪೀಠದ ಅಭಿಮಾನಿಗಳು ತಿಳಿಸಿರುತ್ತಾರೆ.

 

ಇತ್ತೀಚಿನ ಸುದ್ದಿಗಳು

error: Content is protected !!