ಹಾವು ಕಚ್ಚಿದೆ ಎಂದರೂ ನಂಬದ ಪೋಷಕರು ಬೆಳಿಗ್ಗೆ ವೇಳೆಗ ಮೃತ ಪಟ್ಟ ಬಾಲಕಿ

ಹಾವು ಕಚ್ಚಿದೆ ಎಂದರೂ ನಂಬದ ಪೋಷಕರು ಬೆಳಿಗ್ಗೆ ವೇಳೆಗ ಮೃತ ಪಟ್ಟ ಬಾಲಕಿ

ಶಿವಮೊಗ್ಗ : ಹಾವು ಕಚ್ಚಿದ ಎಂದು ಹೇಳಿದರೂ ಪೋಷಕರು ನಿರ್ಲಕ್ಷ್ಯ ವಹಿಸಿದ್ದರಿಂದ 17 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.

ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ ತಲ್ಲೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ಅಕ್ಷತಾ ರಾತ್ರಿ ತಾಯಿಯ ಜೊತೆ ಮಲಗಿದ್ದ ವೇಳೆ ಕಿರುಚಾಡಿ ಹಾವು ಕಚ್ಚಿತು ಎಂದಿದ್ದಳು. ಮಧ್ಯರಾತ್ರಿ ವಿದ್ಯುತ್ ದೀಪ ಹಾಕಿದ್ದಾಗ ಬೆಳಕಿನಲ್ಲಿ ಹಾವು ಕಾಣಿಸಿರಲಿಲ್ಲ. ನಂತರ ಆಕೆಯ ದೇಹದಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!