ಪಬ್ಲಿಕ್ ಶಾಲೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಎಸ್ಪಿ ಸಿ.ಬಿ. ರಿಷ್ಯಂತ್ ಚಾಲನೆ

IMG-20210813-WA0029

 

ದಾವಣಗೆರೆ: ಹರಿಹರ ತಾಲ್ಲೂಕಿನ ಕೊಂಡಜ್ಜಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪೊಲೀಸ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಸಸಿಯನ್ನು ನೆಡುವ ಮೂಲಕ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಎಸ್ಪಿ ಸಿ.ಬಿ. ರಿಷ್ಯಂತ್ ಚಾಲನೆ ನೀಡಿದರು.

ಇದೇ ವೇಳೆ ವಿವಿಧ ಬಗೆಯ ಸಸಿಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು. ನಂತರ ಎಸ್ಪಿ ರಿಷ್ಯಂತ್ ಶಾಲೆಯ ವ್ಯವಸ್ಥೆ ಪರಿಶೀಲಿಸಿದರು. ಅವರೊಂದಿಗೆ ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಕಾಶ್, ಆರ್.ಎಸ್.ಐ ಸಂಗಮೇಶ, ಅಗ್ನಿಶಾಮಕ ದಳದ ಆರ್.ಎಫ್.ಓ ಗಳಾದ ಜಯರಾಂ, ಬಸವಪ್ರಭು ಶರ್ಮ ಅವಿನಾಶ್, ಅರಣ್ಯ ಇಲಾಖೆಯ ಡಿ.ಆರ್.ಎಫ್.ಓ ಖಾಲಿದ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!