ಗಣೇಶ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಪೊಲೀಸ್ ಪಥಸಂಚಲನ

ದಾವಣಗೆರೆ: ದಾವಣಗೆರೆ ನಗರದಲ್ಲಿ ದಿನಾಂಕ : 15-09-2024 ರಂದು ನಡೆಯಲಿರುವ ವಿನೋಭಾ ನಗರ 2ನೇ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆಯ ಮೆರವೆಣಿಗೆ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ ದೃಷ್ಠಿಯಿಂದ ಇಂದು ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚನಲ ಹಮ್ಮಿಕೊಳ್ಳಲಾಗಿತ್ತು.
ಪೊಲೀಸ್ ಪಥ ಸಂಚಲನವು ವಿನೋಬ ನಗರದ 2ನೇ ಮುಖ್ಯ ರಸ್ತೆಯ ಗಣೇಶ ದೇವಾಸ್ಥಾನದಿಂದ ಆರಂಭವಾಗಿ ಹಳೆ ಪಿ ಬಿ ರಸ್ತೆ, ಅರುಣ ವೃತ್ತ, ರಾಮ್ & ಕೋ ವೃತ್ತ, ಚರ್ಚ್ ರಸ್ತೆ, ವಿನೋಬ ನಗರ ಒಂದನೆ ಮುಖ್ಯ ರಸ್ತೆ ಮೂಲಕ ಸಾಗಿ ಹಳೆ ಪಿಬಿ ರಸ್ತೆಗೆ ಬಂದು ಅರುಣ ವೃತ್ತಕ್ಕೆ ಮುಕ್ತಾಯವಾಗಿತು.
ಈ ಸಂಧರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಜಯಕುಮಾರ ಸಂತೋಷ ರವರು, ನಗರ ಡಿವೈಎಸ್ಪಿ ಶ್ರೀ ಮಲ್ಲೇಶ್ ದೊಡ್ಮನಿ ರವರು, ಪೊಲೀಸ್ ನಿರೀಕ್ಷಕರುಗಳಾದ ಶ್ರಿ ಗುರುಬಸವರಾಜ, ಶ್ರೀ ನೆಲವಾಗಲು ಮಂಜುನಾಥ, ಶ್ರೀ ಅಶ್ವಿನ್ ಕುಮಾರ, ಶ್ರೀ ಸುನೀಲ್ ಕುಮಾರ್, ಶ್ರೀ ನೂರ್ ಅಹಮ್ಮದ್, ಶ್ರೀಮತಿ ಪ್ರಭಾವತಿ, ಶ್ರೀಮತಿ ಮಲ್ಲಮ್ಮ ಚೌಬೆ ರವರು ಸೇರಿದಂತೆ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು