ಪ್ರಧಾನಿ ಮೋದಿ ಹಾಗೂ ನಡ್ಡಾ ರಿಂದ ಸಿಎಂ ಬೊಮ್ಮಾಯಿಗೆ ಶುಭಾಶಯ

ನವದೆಹಲಿ: ರಾಜ್ಯಕ್ಕೆ ನೂತನ ರಾಯಭಾರಿಯಾಗಿ ಆಯ್ಕೆಯಾದ ನಂತರ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಕುರಿತು ಮಾತುಕತೆ ನಡೆಸಿದರು.
ನೂತನವಾಗಿ ರಾಜ್ಯದ ಮುಖ್ಯಮಂತ್ರಿ ಗಾದೆ ಅಲಂಕರಿಸಿದ ಮೇಲೆ ಬಸವರಾಜ ಬೊಮ್ಮಾಯಿ ಅವರು ಇಂದು ಮೊದಲ ಬಾರಿಗೆ ದೆಹಲಿಯಲ್ಲಿ ಪ್ರಧಾನಮಂತ್ರಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದರು.
ಭೇಟಿ ವೇಳೆ ರಾಜ್ಯದ ಅಭಿವೃದ್ಧಿ ಬಗ್ಗೆ ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚೆ ನಡೆಸಿದ್ದು, ಪ್ರಧಾನಿ ಮೋದಿ ಶುಭ ಕೋರಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.