ದೇಶದ ಸರ್ವತೋಮುಖ ಅಭಿವೃದ್ದಿಗೆ ಕಾನೂನು ಅರಿವು ಅತ್ಯಗತ್ಯ:ಪ್ರವೀಣ್ ನಾಯಕ್

Kanunu arivu karyakrama (1)

ದಾವಣಗೆರೆ: ನಮ್ಮ ದೇಶವು ಸರ್ವತೋಮುಖ ಅಭಿವೃದ್ದಿ ಸಾಧಿಸಬೇಕಾದರೆ, ಜನರಲ್ಲಿ ಕಾನೂನಿನ ಅರಿವಿನ ಮಟ್ಟ ಹೆಚ್ಚಬೇಕಾದುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ್ ತಿಳಿಸಿದರು. ನಗರದ ರೋಟರಿ ಬಾಲಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳು, ನೆರಳು ಬೀಡಿ ಕಾರ್ಮಿಕರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿನ ಮಹಿಳೆಯರು, ಕಡುಬಡವರು, ಮಧ್ಯಮ, ಹಿಂದುಳಿದ ವರ್ಗದ ಜನರು ತಮ್ಮನ್ನು ತಾವು ಶೋಷಣೆಯಿಂದ ರಕ್ಷಿಸಿಕೊಳ್ಳಲು ತಮಗಿರುವ ಕಾನೂನಿನ ಜ್ಞಾನ ಹೆಚ್ಚಿಸಿಕೊಳ್ಳವುದು ಅನಿವಾರ್ಯ ಎಂದು ಹೇಳಿದರು.ಇಂದಿನ ದಿನಮಾನಗಳಲ್ಲಿ ಎಲ್ಲರಿಗೆ, ಅದರಲ್ಲೂ ಮಹಿಳೆಯರಿಗೆ ಕಾನೂನಿನ ಜ್ಞಾನ ಇರಬೇಕಾದುದು ಅವಶ್ಯಕ. ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ, ಶೋಷಣೆ, ಭ್ರೂಣಹತ್ಯೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ, ಪೋಸ್ಕೋದಂತಹ ಪ್ರಕರಣಗಳನ್ನು ತಡೆಯುವ ಸಲುವಾಗಿ ಕಾನೂನು ಜಾರಿಯಲ್ಲಿದ್ದು, ಅವುಗಳ ಬಗ್ಗೆ ತಿಳಿಯಬೇಕಿದೆ. ಈ ಕುರಿತು ಕಾನೂನು ಸೇವಾ ಪ್ರಾಧಿಕಾರವು ಕಾನೂನು ಕಾರ್ಯಾಗಾರ, ಶಿಬಿರ, ವಿಚಾರ ಸಂಕಿರಣಗಳು ಸೇರಿದಂತೆ ಮತ್ತಿತರೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ ಎಂದು ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಹಿರಿಯ ನ್ಯಾಯವಾದಿ ಎಲ್.ಹೆಚ್.ಅರುಣ್‌ಕುಮಾರ್ ಮಾತನಾಡಿ, ಸ್ವಾತಂತ್ರö್ಯ, ಸಂವಿಧಾನ ಜಾರಿಗೆ ಬಂದು 7 ದಶಕಗಳೇ ಕಳೆದರೂ ಮಹಿಳೆಯರು ಮತ್ತು ಮಕ್ಕಳು ಶೋಷಣೆಗೆ ಒಳಗಾಗುತ್ತಿರುವುದು ವಿಷಾಧನೀಯ. ಇಂದಿನ ದಿನಮಾನಗಳಲ್ಲಿ ಬದುಕು ಹೆಚ್ಚುಹೆಚ್ಚು ಸಂಕೀರ್ಣ ಆಗತೊಡಗಿದೆ. ಜನರು ಒಂದಿಲ್ಲೊAದು ಸಮಸ್ಯೆ ಎದುರಿಸುವುದು ಸರ್ವೇ ಸಾಮಾನ್ಯವಾಗಿದೆ ಎಂದರು. ಆಸ್ಪತ್ರೆಗಳು, ಪೊಲೀಸ್ ಠಾಣೆಗಳು, ನ್ಯಾಯಾಲಯಗಳು ಜನಸ್ನೇಹಿ ಕೇಂದ್ರಗಳಾಗಿ ಕೆಲಸ ಮಾಡುವ ಅಗತ್ಯವಿದೆ. ಆಗಾದಾಗ ಮಾತ್ರ ಜನರು ಯಾವುದೇ ಹಿಂಜರಿಕೆ ಇಲ್ಲದೇ ನಿರ್ಭೀಡೆಯಿಂದ ಅವುಗಳ ಸದುಪಯೋಗ ಪಡೆಯಲು ಮುಂದಾಗುತ್ತಾರೆ ಎಂದು ಹೇಳಿದರು.

ಮಹಿಳಾ ಠಾಣೆಯ ಅರಕ್ಷಕ ನಿರೀಕ್ಷಕಿ ವೈ.ಎಸ್.ಶಿಲ್ಪಾ ಮಾತನಾಡಿ, ಗರ್ಭದಿಂದ ಗೋರಿಯವರೆಗೆ ಜನಸಾಮಾನ್ಯರ ಜೀವನದಲ್ಲಿ ಬರುವ ಸಂಕಷ್ಟಗಳ ನಿವಾರಣೆಗಾಗಿ ಕಾನೂನುಗಳು ಇದ್ದು, ಅವುಗಳ ಸಮರ್ಪಕ ಅನುಷ್ಠಾನ ಆದಾಗ ಮಾತ್ರ ಜನಸಾಮಾನ್ಯರಿಗೆ ಸಮಾಜದಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಬದುಕಲು ಸಾಧ್ಯ ಎಂದರು. ದಾವಣಗೆರೆ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ನರಸಿಂಹ ತಾಮ್ರಧ್ವಜ ಮಾತನಾಡಿ, ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಇಲಾಖೆಗೆ ಶಕ್ತಿ ಬರುತ್ತದೆ. ವಿನಃ ಪೊಲೀಸರೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಯಾವುದೇ ಅಪರಾಧಿ ಆಗಲಿ ಆತನಿಗೆ ಕ್ಷಮೆ ಬೇಡ. ಅಪರಾಧಕ್ಕೆ ತಕ್ಕ ಶಿಕ್ಷೆ ಆಗಬೇಕು ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ತಕ್ಷಣವೇ ಸಹಕರಿಸಬೇಕು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನೆರಳು ಬೀಡಿ ಸಂಘದ ಅಧ್ಯಕ್ಷೆ ಜಬೀನಾ ಖಾನಂ ಮಾತನಾಡಿ, ಸಂವಿಧಾನದಲ್ಲಿ ನಮಗೆ ಎಲ್ಲ ಹಕ್ಕುಗಳನ್ನು ಕೊಟ್ಟಿದೆ ಆದರೆ ಬಹುಶಃ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಕಾರಣ ಹಲವು ಕಾನೂನುಗಳನ್ನು ತಿಳಿದುಕೊಂಡಾಗ ಮಾತ್ರ ನಮ್ಮ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಕಾನೂನುಗಳನ್ನು ತಿಳಿದುಕೊಂಡು ಇತರರಿಗೂ ಸಹಾಯ ಹಸ್ತ ನೀಡುವುದು ನಮ್ಮ ಕರ್ತವ್ಯ ಎಂದು ಹೇಳಿದರು. ವೇದಿಕೆಯಲ್ಲಿ ನೆರಳು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಮುಸ್ಲೀಂ ಮಹಿಳಾ ಒಕ್ಕೂಟದ ಸದಸ್ಯೆ ಆಸ್ಮಾ ಬಾನು ಇದ್ದರು.

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!