“ಪುನೀತ್ ರಾಜ್ ಕುಮಾರ್’ ಅಕಾಲಿಕ ನಿಧನ ಕನ್ನಡ ಚಿತ್ರ ಜಗತ್ತಿಗೆ ತುಂಬಲಾರದ ನಷ್ಟ” – ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದ್ದು, ಏನು ಹೇಳಲೂ ತೋಚದಂತಾಗಿದೆ ಎಂದು ವಿಧಾನಸಭೆಯ ಸ್ಪೀಕರ್ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಶ್ರೀ ಕಾಗೇರಿ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ. ಕನ್ನಡ ಚಿತ್ರ ರಂಗದಲ್ಲಿ ಪುನೀತ್ ರಾಜ್ ಕುಮಾರ್ ತಮ್ಮದೇ ಆದ ಛಾಪು ಮೂಡಿಸಿದ್ದರು. ತಾವು ನಿರ್ವಹಿಸುತ್ತಿದ್ದ ಪಾತ್ರಕ್ಕೆ ಜೀವ ತುಂಬುತ್ತಿದ್ದರು. ಅವರ ಅಕಾಲಿಕ ನಿಧನ ನಿಜಕ್ಕೂ ದುರ್ದೈವ, ಬಹುಮುಖ ಪ್ರತಿಭೆಯ ಅದ್ಭುತ ನಟನ ಬದುಕು ಅರ್ಧಕ್ಕೇ ನಿಂತಿದ್ದು ನಿಜಕ್ಕೂ ದುರಾದೃಷ್ಟಕರ ಎಂದು ಅವರು ತಿಳಿಸಿದ್ದಾರೆ.