ದಾವಣಗೆರೆ

RAIN: ಭಾರೀ ಮಳೆ ಮುನ್ಸೂಚನೆ: ಪ್ರಾಣಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ

Share
Share

ದಾವಣಗೆರೆ:(RAIN)  ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂದು ಮಳೆಯಿಂದಾಗಬಹುದಾದ ಅನಾಹುತಗಳ ತಡೆಗಟ್ಟುವಿಕೆ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಏರ್ಪಸಿದ್ದ ʼಗೂಗಲ್‌ ಮೀಟ್‌’ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆ ಹಾಗೂ ಗಾಳಿಯಿಂದಾಗಿ ರಸ್ತೆ ಬದಿಯ ಮರಗಳು ಧರೆಗುರುಳುವ ಮತ್ತು ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆ ಹೆಚ್ಚಿರುತ್ತದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬೆಸ್ಕಾಂ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಸನ್ನದ್ಧರಾಗಿರಬೇಕು. ತುರ್ತು ತಂಡಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಬೃಹತ್ ಕಾಂಪೌಂಡ್ ಗೋಡೆಗಳ ಸುರಕ್ಷತೆಯನ್ನು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಅಪಾಯಕಾರಿ ಸ್ಥಿತಿಯಲ್ಲಿರುವ ಗೋಡೆಗಳ ಬಗ್ಗೆ ಸಂಬಂಧಪಟ್ಟವರಿಗೆ ಮುನ್ನೆಚ್ಚರಿಕೆ ನೀಡಬೇಕು. ಅಲ್ಲದೆ, ಜಿಲ್ಲೆಯಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳನ್ನು ಗುರುತಿಸಿ, ಅಲ್ಲಿ ವಾಸಿಸುತ್ತಿರುವ ಜನರನ್ನು ತಕ್ಷಣವೇ ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಮಳೆ ನೀರು ಸರಾಗವಾಗಿ ಹರಿಯಲು ಅಡ್ಡಿಯಾಗಿರುವ ಚರಂಡಿಗಳನ್ನು ತಕ್ಷಣವೇ ಸ್ವಚ್ಛಗೊಳಿಸಬೇಕು. ಎಲ್ಲಿಯೂ ನೀರು ನಿಂತು ಕೃತಕ ಪ್ರವಾಹ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ದೂರು ಹಾಗೂ ತುರ್ತು ನೆರವಿಗಾಗಿ ಎಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಿ, ಅವುಗಳ ದೂರವಾಣಿ ಸಂಖ್ಯೆಗಳನ್ನು ಸಾರ್ವಜನಿಕರಿಗೆ ತಿಳಿಯುವಂತೆ ಪ್ರಕಟಿಸಬೇಕು ಎಂದರು.

ಸಿಡಿಲು ಹಾಗೂ ಮಳೆಯಿಂದ ಉಂಟಾಗಬಹುದಾದ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು. ಸಿಡಿಲು ಬಡಿಯುವ ಮುನ್ಸೂಚನೆ ನೀಡುವ ‘ದಾಮಿನಿ’ ಆಪ್ ಅನ್ನು ಪ್ರತಿಯೊಬ್ಬ ಸಾರ್ವಜನಿಕರು ಹಾಗೂ ಅಧಿಕಾರಿಗಳು ಅಳವಡಿಸಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದರು.

ವಿಪತ್ತು ನಿರ್ವಹಣಾ ತಂಡ, ಲೋಕೋಪಯೋಗಿ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕದಳ ಅಧಿಕಾರಿಗಳು ಸನ್ನದ್ಧರಾಗಿದ್ದು, ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಪರಿಸ್ಥಿತಿಯನ್ನು ಅವಲೋಕಿಸಬೇಕು. ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಯಾವುದೇ ವಿಳಂಬ ಅಥವಾ ನಿರ್ಲಕ್ಷ ತೋರಬಾರದು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ಅಪರಾಧ

Sand: ದಾವಣಗೆರೆಯಲ್ಲಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ: ಗಣಿ ಸಚಿವರ ಆಪ್ತನಿಂದ ಪೊಲೀಸರ ಮೇಲೆ ಒತ್ತಡ.?

ದಾವಣಗೆರೆ:(Sand) ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್...

ದಾವಣಗೆರೆ

DC: ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸಮರ್ಪಕ ಸರಬರಾಜಿಗೆ ಕ್ರಮ : ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ: (DC) ಜಿಲ್ಲೆಯಲ್ಲಿ ಮುಂಗಾರು ನಿರೀಕ್ಷಿತ ಅವಧಿಯೊಳಗೆ ಆರಂಭಗೊಳ್ಳದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆ, ಕಟ್ಟೆ-ಕಾಲುವೆಗಳಲ್ಲಿ ಸಂಗ್ರಹವಾಗಿದ್ದ ನೀರು ದಿನೇದಿನೇ ಬತ್ತಿ ಹೋಗುತ್ತಿದೆ ಮಾತ್ರವಲ್ಲ ಅಂತರ್ಜಲದ ಮಟ್ಟ ಕಡಿಮೆಯಾಗಿದ್ದು, ಗ್ರಾಮೀಣ ಜನ-ಜಾನುವಾರುಗಳಿಗೆ ಉಂಟಾಗಬಹುದಾದ...

Related Articles
ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು...

ದಾವಣಗೆರೆಅಪರಾಧ

Matka: ದಾವಣಗೆರೆ – ಹರಿಹರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಕೆ.ಎಸ್. ಭಗವಾನ್ ಹೇಳಿಕೆ ವಿರುದ್ಧ ಶಾಸಕ ಬಿ.ಪಿ. ಹರೀಶ್ ಕಿಡಿ

ದಾವಣಗೆರೆ:(Matka) ಜಿಲ್ಲೆ ಹಾಗೂ ಹರಿಹರ ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು, ಇತ್ತೀಚೆಗೆ ನಡೆದ ವಿವಾದಾತ್ಮಕ...

ದಾವಣಗೆರೆ

Davanagere: ದಾವಣಗೆರೆಯಲ್ಲಿ ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ ಯಶಸ್ವಿ

ದಾವಣಗೆರೆ: (Davanagere) ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಆಯೋಜಿಸಲು ಉದ್ದೇಶಿಸಿರುವ...