ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಸುಲ್ತಾನ್ ಬಿ ಅಭಿನಂದಿಸಿದ ದಾವಣಗೆರೆ ಜಿಲ್ಲಾ ಕಸಾಪ

IMG-20220211-WA0064

 

ದಾವಣಗೆರೆ: ಸುಲ್ತಾನ್ ಬೀ ಅವರು ನಮ್ಮ ಜಿಲ್ಲೆಯ ಹೆಮ್ಮೆಯ ಗ್ರಾಮೀಣ ಪ್ರತಿಭೆ…
ಸಾಧಕರನ್ನು, ಪ್ರತಿಭೆಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಸದಾ ಗುರುತಿಸಿ ಗೌರವಿಸುತ್ತದೆ. ಬಿ.ವಾಮದೇವಪ್ಪ
ಅಧ್ಯಕ್ಷರು, ಜಿಲ್ಲಾ ಕಸಾಪ

ಕರ್ನಾಟಕ ಸರಕಾರದಿಂದ 2021 ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ದಾವಣಗೆರೆ ಜಿಲ್ಲೆಯ ಗ್ರಾಮೀಣ ಪ್ರತಿಭೆ ಸೂಲಗಿತ್ತಿ ಸುಲ್ತಾನ್ ಬೀ ಅವರನ್ನು ಜಗಳೂರು ತಾಲೂಕಿನ ಗೊಲ್ಲರಹಟ್ಟಿಯ ಅವರ ನಿವಾಸದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಮಾತನಾಡಿ ಸುಲ್ತಾನ್ ಬೀ ಅವರು ಜಗಳೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬಡವರಿಗೆ ವೈದ್ಯಕೀಯ ನೆರವು ನೀಡುವುದರ ಮೂಲಕ ಮನೆ ಮಾತಾಗಿದ್ದಾರೆ. ಹಳ್ಳಿಗಳಲ್ಲಿ ಸಾವಿರಾರು ಹೆರಿಗೆ ಮಾಡಿಸಿ ಜನರಿಗೆ ನೆರವಾಗಿದ್ದರು. ಇಸುಬು, ಹುಳಕಡ್ಡಿ ಹಾಗೂ ಅನೇಕ ರೀತಿಯ ಚರ್ಮ ರೋಗಗಳಿಗೆ ತಾವೇ ತಯಾರಿಸಿದ ನಾಟಿ ಔಷಧಿಗಳ ಮೂಲಕ ಚಿಕಿತ್ಸೆ ನೀಡುತ್ತಿದ್ದರು. ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬರುವ ಕೆಲಸವನ್ನೂ ಮಾಡುತ್ತಿದ್ದರು‌. ಇಂತಹ ಸಮಾಜಮುಖಿ ಸಾಧಕಿಗೆ ಕರ್ನಾಟಕ ಸರಕಾರವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಅತ್ಯಂತ ಸೂಕ್ತವಾಗಿದೆ. ೨೦೧೯ ರಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಗಿನ ಅಧ್ಯಕ್ಷರಾದ ಡಾ.ಹೆಚ್.ಎಸ್‌.ಮಂಜುನಾಥ್ ಕುರ್ಕಿಯವರ ಅಧ್ಯಕ್ಷತೆಯ ಅವಧಿಯಲ್ಲಿ ಸುಲ್ತಾನ್ ಬೀ ಅವರ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಗ್ರಾಮೀಣ ಸಿರಿ ಪ್ರಶಸ್ತಿಯೊಂದಿಗೆ ಗೌರವಿಸಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸದಾ ಸಾಧಕರನ್ನು ಮತ್ತು ಪ್ರತಿಭೆಗಳನ್ನು ಗುರುತಿಸಿ, ಗೌರವಿಸುವ ಕೆಲಸ ಮಾಡಲಿದೆ ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ, ಜಗಳೂರು ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಹಜರತ್ ಅಲಿ ಮತ್ತು ಸುಲ್ತಾನ್ ಬೀ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಧನ್ಯವಾದಗಳೊಂದಿಗೆ,

ಬಿ.ವಾಮದೇವಪ್ಪ
ಅಧ್ಯಕ್ಷರು
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು
ದಾವಣಗೆರೆ ಜಿಲ್ಲೆ

ಮೊಃ ೯೪೪೮೮೧೨೭೦೪

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!