ಪಕ್ಷ, ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ: ಜನಸೇವೆಯೇ ನನ್ನ ಕಾಯಕ: ಸಚಿವ ಸ್ಥಾನ ವಂಚಿತ ಹೊನ್ನಾಳಿ ಶಾಸಕ ರೇಣುಕಾಚಾರ್ಯ!

ದಾವಣಗೆರೆ: ಕರೋನಾ ಸಂದರ್ಭದಲ್ಲಿ ಸೋಂಕಿತರೊಂದಿಗೆ ವಾಸ್ತವ್ಯ ಹೂಡಿ ಆತ್ಮಸ್ಥೈರ್ಯ ತುಂಬುವ ಮೂಲಕ ಜನಮನ್ನಣೆ ಗಳಿಸಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೈತಪ್ಪಿದ್ದು, ಇದರಿಂದ ಅಭಿಮಾನಿಗಳು ನಿರಾಶರಾಗದಂತೆ ಅವರು ಟ್ವೀಟ್ ಮೂಲಕ ಕೋರಿದ್ದಾರೆ.
ಪಕ್ಷ ನನಗೆ ತಾಯಿ ಸಮಾನ, ಪಕ್ಷ, ಸಂಘಟನೆ ಹಾಗೂ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದನಾಗಿದ್ದೇನೆ. ಜನ ಸೇವೆಯೇ ನನ್ನ ಕಾಯಕ, ನನ್ನ ಜೀವನವನ್ನು ನನ್ನ ಮತ ಕ್ಷೇತ್ರದ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಜನತೆಯ ಸೇವೆಗೆ ಮುಡಿಪಾಗಿಡುತ್ತೇನೆ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗಬಾರದು ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅಲ್ಲದೇ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಪಕ್ಷವನ್ನು ಸಂಘಟಿಸುವಂತೆ ಅಭಿಮಾನಿಗಳಿಗೆ ಹಾಗೂ ಕಾರ್ಯರ್ತರಿಗೆ ಮನವಿ ಮಾಡಿದ್ದಾರೆ.