ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ದಾವಣಗೆರೆ ಜಿಲ್ಲೆಗೆ ಭೇಟಿ

 

ದಾವಣಗೆರೆ: ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಅಧ್ಯಕ್ಷರು ಮತ್ತು ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನ ಕುಮಾರ್ ಅವರುಗಳು ಬುಧವಾರ ಹರಿಹರ ಗ್ರಾಮಾಂತರ ಠಾಣೆ, ಹರಿಹರ ಅಗ್ನಿಶಾಮಕ ಕಚೇರಿ, ಸಿಇಎನ್ ಠಾಣೆಗಳಿಗೆ ಭೇಟಿ ನೀಡಿ ಆಡಳಿತ ಸುಧಾರಣೆ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಲಹೆಗಳನ್ನು ಪಡೆದರು.

ನಂತರ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ವಿಶೇಷ ಘಟಕಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸಲಹೆ ಪಡೆದರು.

ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಹಾಗೂ ಸಹಾಯಕ ಆಡಳಿತಾಧಿಕಾರಿ‌ ನಾಗೇಶ್, ಡಿವೈಎಸ್ಪಿ ಬಿ.ಎಸ್. ಬಸವರಾಜ, ನರಸಿಂಹ ವಿ.ತಾಮ್ರದ್ವಜ, ನಾಗೇಶ್ ಐತಾಳ್, ಸಂತೋಷ್ ಕೆ.ಎಂ ಹಾಗೂ ವಿಶೇಷ ಘಟಕಗಳ ಅಧಿಕಾರಿಗಳು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!