ಕರ್ನಾಟಕ ರಾಜ್ಯ ಬಜೆಟ್ 2022, ದಾವಣಗೆರೆ ಜಿಲ್ಲೆಯ ಜನತೆಯ ನಿರೀಕ್ಷೆಗಳನ್ನ ತಿಳಿಸಿದ ರೋಹಿತ್ ಜೈನ್

ದಾವಣಗೆರೆ: ಮುಖ್ಯಮಂತ್ರಿ ಅವರು ಮಾರ್ಚ್ ರಂದು ಮಂಡಿಸಲಿರುವ ಬಜೆಟ್ ಮೇಲೆ ರಾಜ್ಯದ ಜನರು ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
ನಮ್ಮ ದಾವಣಗೆರೆ ಜಿಲ್ಲಾವಾರು ,ಅನೇಕ ಬೇಡಿಕೆಗಳು ಇಟ್ಟುಕೊಂಡಿದ್ದಾರೆ
1.ಸ್ಮಾರ್ಟ್ಸಿಟಿ ಯೋಜನೆ ಕಾಮಗಾರಿ ಚುರುಕಿಗೆ ವಿಶೇಷ ಅನುದಾನ.
2.ದಾವಣಗೆರೆ ಜಿಲ್ಲೆಗೊಂದು ಐಟಿ ಹಬ್ ಬೇಕು ಎಂಬುವುದು ಜನರ ಬಹುದಿನದ ಬೇಡಿಕೆ.
3.ಪ್ರವಾಸೋದ್ಯಮಕ್ಕೆ ಬೇಕಾದ ಯೋಜನೆ ಜನರ ನಿರೀಕ್ಷೆ ( ಶಾಂತಿಸಾಗರ , ಕೊಂಡಜ್ಜಿ , ಹರಿಹರ , ಅನಗೋಡು ಪಾರ್ಕ್)
4.ಜಿಲ್ಲೆಯ ಜನರಿಗೆ ಉದ್ಯೋಗ ಸೃಷ್ಟಿಗೆ ಬೇಕಾದ ಯೋಜನೆಗಳು, ಜಿಲ್ಲೆಯಲ್ಲಿ ಜವಳಿ ಪಾರ್ಕ್ ನಿಮಾ೯ಣ. ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಬಡಾವಣೆ ನಿರ್ಮಾಣ , ಬೃಹತ್ ಕೈಗಾರಿಕೆ ಘಟಕಗಳ ಆರಂಭಕ್ಕೆ ‘ಲ್ಯಾಂಡ್ ಬ್ಯಾಂಕ್
5. ರೈಲ್ವೆ, ಹೆದ್ದಾರಿ ಯೋಜನೆಗಳಿಗೆ ಹಣ ಬಿಡುಗಡೆ.
6.ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಜವಳಿ ಫ್ಯಾಕ್ಟರಿ, ಜೊತೆ ಇತರೆ ಕೈಗಾರಿಕೆಗಳು , ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ ಮಾಡಬೇಕು
7. ದಶಕದಿಂದ ಬೇಡಿಕೆ , ದಾವಣಗೆರೆ ವಿಮಾನ ನಿಲ್ದಾಣಕ್ಕೆ ಮಂಜೂರು ಹಾಗು ಅನುದಾನ ( ಉಡಾನ್ ಯೋಜನೆಯಡಿ ದಾವಣಗೆರೆ ವಿಮಾನ ನಿಲ್ದಾಣ ನಿರ್ಮಾಣ) , ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯಾಗಬೇಕಿದೆ, ಪಾಳು ಬಿದ್ದಿರುವ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಕೈಗಾರಿಕೆಗಳನ್ನು ಸೆಳೆಯಬೇಕು
8.ತುಂಗಭದ್ರಾ ನದಿಯ ಹೂಳು ತೆಗೆದರೆ ದಾವಣಗೆರೆ ಭಾಗದ ಎಲ್ಲಾ ರೈತರಿಗೂ ಅನುಕೂಲವಾಗಲಿದೆ.
9.ದಾವಣಗೆರೆ – ಚಿತ್ರದುರ್ಗ – ತುಮಕೂರು ನೇರ ರೈಲು ಮಾರ್ಗದ ಭೂ ಖರೀದಿ ಕಾರ್ಯವನು ಚುರುಕುಗೊಳಿಸಬೇಕು.
10.ಸ್ಥಳೀಯ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಒತ್ತು ನೀಡಲಿ.
11.ದಾವಣಗೆರೆ ಹೊರ ವರ್ತುಲ ರಸ್ತೆಗೆ ಹೆಚ್ಚಿನ ಅನುದಾನ
12. ದಾವಣಗೆರೆ ಮಕ್ಕಳ ಉದ್ಯಾನವನಗಳಿಗೆ , ಹೆಚ್ಚಿನ ಹಣ .
13. ದಾವಣಗೆರೆ ನಗರದ ನಾನಾ ಬಡಾವಣೆ, ಸಾಕಷ್ಟು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ , ಕೆರೆ ತುಂಬಿಸುವ ಯೋಜನೆ ಅನುಷ್ಠಾನವಾಗಬೇಕು
14. ದಾವಣಗೆರೆ ಜಿಲ್ಲೆಯ ಕೃಷಿ ಉತ್ಪಾದನೆ ಸಂರಕ್ಷಣೆಗಾಗಿ ಫುಡ್ ಪಾರ್ಕ್ ಆರಂಭಿಸಬೇಕು.
15. ದಾವಣಗೆರೆ ಟ್ರಾಫಿಕ್ ದಟ್ಟಣೆ ತಡೆಗಟ್ಟುವ ನಿಟ್ಟಿನಲ್ಲಿ , ಕ್ರಮ
16. ದಾವಣಗೆರೆ ಜಿಲ್ಲೆಯಲ್ಲಿ ಒಂದು ಹೊಸದಾದ , ಸುಸಜಿತ ಜಿಲ್ಲಾ ಕ್ರೀಡಾಂಗಣ ಮತ್ತು ಕ್ರೀಡಾ ಹಾಸ್ಟೆಲ್ಗಳನ್ನು ಸ್ಥಾಪಿಸಬೇಕು