ಆರ್ ಎಸ್ ಎಸ್ ಬಗ್ಗೆ ಮಾತನಾಡಿದವರು ಸರ್ವನಾಶ ಆಗುತ್ತಾರೆ – ಹೆಚ್ ಡಿ ಕೆ ಭವಿಷ್ಯ ನುಡಿದ ರೇಣುಕಾಚಾರ್ಯ

IMG-20211017-WA0104

ದಾವಣಗೆರೆ: ಆರ್​ಎಸ್​ಎಸ್​​ ಬಗ್ಗೆ ಮಾತನಾಡುವ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಒಬ್ಬ ಅರೆಹುಚ್ಚ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್​ಎಸ್​ಎಸ್​​ ಅದೊಂದು ನಿಸ್ವಾರ್ಥ ಸೇವೆ ಮಾಡುವ ವಿಶ್ವದ ಅತೀ ದೊಡ್ಡ ಸಂಸ್ಥೆ. ಅಂತಹ ಆರೆಸ್ಸೆಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಅರೆಹುಚ್ಚನೇ ಹೌದು ಎಂದು‌ ಕಿಡಿಕಾರಿದರು.

ಆರ್​ಎಸ್​ಎಸ್ ಹಿಂದುತ್ವ, ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುತ್ತಿದೆ. ಆರೆಸ್ಸೆಸ್ ಬಗ್ಗೆ ಮಾತನಾಡಿದವರು ಸರ್ವನಾಶ ಆಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್​ಎಸ್​ಎಸ್ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ. ಅದರ ಸಿದ್ಧಾಂತಗಳನ್ನು ಪಾಲಿಸಿದಾಗ ಮಾತ್ರ ಅದರ ಮಹತ್ವ ತಿಳಿಯುತ್ತದೆ ಎಂದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!