ಹಾಲಾಡಿ ಶಸ್ತ್ರ ತ್ಯಾಗ..! ಬಿಜೆಪಿಯಲ್ಲಿ ಏನಿದು ಅಚ್ಚರಿಯ ಬೆಳವಣಿಗೆ?

ಹಾಲಾಡಿ ಶಸ್ತ್ರ ತ್ಯಾಗ..! ಬಿಜೆಪಿಯಲ್ಲಿ ಏನಿದು ಅಚ್ಚರಿಯ ಬೆಳವಣಿಗೆ?

ಉಡುಪಿ: ಕರುನಾಡಿನ ವಾಜಪೇಯಿ ಎಂದೇ ಖ್ಯಾತರಾಗಿರುವ ಸೋಲಿಲ್ಲದ ಸರದಾರ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನೆಂಬುದು ಬಿಜೆಪಿ ಕಾರ್ಯಕರ್ತರಿಗೆ ಯಕ್ಷ ಪ್ರಶ್ನೆಯಾಗಿ ಕಾಡಿದೆ.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಚುನಾವಣ ಸ್ಪರ್ಧಾ ಕಣದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿರುವ ಬಗ್ಗೆ ಬಿಜೆಪಿ ಪಾಳಯದಲ್ಲಿ ಭಾರೀ ಚರ್ಚೆ ಸಾಗಿದೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಕುಂದಾಪುರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆದಿದೆ. ಆವೇಳೆ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಶಸ್ತ್ರ ತ್ಯಾಗದ ಬಗ್ಗೆ ಪ್ರಸ್ತಪವಾಗಿದೆ. ನಿರ್ಧಾರವೂ ಹೊರಬಿದ್ದಿದೆ.
ಇದೇ ವೇಳೆ, ಊರಿಗೆ ಮರಳಿದ ಹಾಲಾಡಿಯವರು ತಮ್ಮ ಆಪ್ತರ ಸಭೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ 5 ಅವಧಿಗೆ ತಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿರುವ ಅವರು, ತಾವು ಯಾವ ಕಾರಣಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾಗಿ ಸ್ಪಷ್ಟವಾಗಿ ತಿಳಿಸಿಲ್ಲ .
‘ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಛೆಯಿಂದ ಸ್ಪರ್ಧಿಸದೆ ಇರಲು ನಿಶ್ಚಯಿಸಿರುತ್ತೇನೆ. ಈ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗೆ ಎಲ್ಲ ಮತಬಾಂಧವರೂ ಸಹಕಾರ ನೀಡಿ’ ಎಂದು ಅವರು ಬೆಂಬಲಿಗರಲ್ಲಿ ಮನವಿ‌ ಮಾಡಿರುವ ಬೆಳವಣಿಗೆ ಕೂಡಾ ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!