ದಾವಣಗೆರೆ

Samarth: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಾನವನ ಹೆಚ್ಚಿಸಲು ಸಮರ್ಥ್ ಶ್ಯಾಮನೂರು ಮಲ್ಲಿಕಾರ್ಜುನ್ ಸೂಚನೆ

Share
Share

ದಾವಣಗೆರೆ: (Samarth) ದಾವಣಗೆರೆ ದಕ್ಷಿಣ ಕ್ಚೇತ್ರದಲ್ಲಿ ಹೆಚ್ಚು ಉದ್ಯಾನವನಗಳನ್ನು ನಿರ್ಮಿಸುವ ಜೊತೆಗೆ ಜನಪ್ರತಿನಿಧಿಗಳಿಗೆ ಮನವರಿಕೆ ಆಗುವಂತೆ ಕಾಮಗಾರಿಗಳ ವಿವರಣೆ ನೀಡಬೇಕೆಂದು ಅಧಿಕಾರಿಗಳಿಗೆ ಶಾಸಕರಾದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಸೂಚನೆ ನೀಡಿದರು.

ಮಹಾನಗರಪಾಲಿಕೆ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳ ವಿವರಗಳನ್ನು ಸಾರ್ವಜನಿಕರಿಗೆ ಅರ್ಥವಾಗುವ ರೀತಿಯಲ್ಲಿ ನೀಡಬೇಕು ಎಂದರು.

ಜಲಸಿರಿಯಡಿ ನಲ್ಲಿ ಸಂಪರ್ಕ ಅಳವಡಿಸಿದ ಕೆಲವು ಮನೆಗಳಿಗೆ ದುಬಾರಿ ಮೊತ್ತದ ನೀರಿನ ಬಿಲ್ ಬರುತ್ತಿರುವುದರಿಂದ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಶಿವನಗರದಲ್ಲಿ ಜಲಸಿರಿ ಸಂಪರ್ಕವು ಇನ್ನೂ ಆಗಿಲ್ಲ. ಜಲಸಿರಿ ಯೋಜನೆಯಲ್ಲಿನ ಸಮಸ್ಯೆಗಳು ಮತ್ತು ವಿಳಂಬದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ವಿಳಂಬ, ಅನಿಯಮಿತ ನೀರು ಸರಬರಾಜು ಮತ್ತು ದುಬಾರಿ ಬಿಲ್ ಅಂತಹ ದೂರುಗಳ ಬಗ್ಗೆ ಜನಪ್ರತಿನಿಧಿಗಳಿಗೆ ಪಾಲಿಕೆ ಅಧಿಕಾರಿಗಳು ಕೂಡಲೇ ಉತ್ತರ ನೀಡುವಂತೆ ತಿಳಿಸಿದರು.

ಕುಡಿಯುವ ನೀರು, ಸ್ವಚ್ಛತೆ ಮತ್ತು ರಸ್ತೆಗಳಂತಹ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ದಾವಣಗೆರೆ ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ಸ್ಮಾರ್ಟ್ ಸಿಟಿ ಹಾಗೂ ಪಾಲಿಕೆಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಬೇಕೆಂದರು.

*ಬೆಸ್ಕಾಂ* : ಬೆಸ್ಕಾಂ ಸಹಾಯವಾಣಿಗೆ ಬರುವ ಕರೆಗಳ ಮೂಲಕ ಸಮಸ್ಯೆಗಳನ್ನು ಹೇಗೆ ಪರಿಹರಿಸುತ್ತೀರಿ ಎಂಬುದನ್ನು ವಿವರವಾಗಿ ತಿಳಿಸಿ ಎಂದ ಅವರು ಮತ್ತು ಮುಂದಿನ ದಿನಗಳಲ್ಲಿ ಬರುವ ಗಣೇಶ ಚತುರ್ಥಿ ಹಬ್ಬಕ್ಕೆ ರಸ್ತೆಯಲ್ಲಿರುವ ವಿದ್ಯುತ್ ಕಂಬ, ತಂತಿಗಳನ್ನು ಕೂಡಲೇ ಸರಿಪಡಿಸಿಬೇಕೆಂದರು.

ದಾವಣಗೆರೆ ನಗರದಲ್ಲಿ ಏಕಕಾಲಕ್ಕೆ ವಿದ್ಯುತ್ ಕಡಿತಗೊಳಿಸಬಾರದು, ಹಂತ ಹಂತವಾಗಿ ವಿದ್ಯುತ್ ಕಡಿತಗೊಳಿಸಿ ಇದಕ್ಕಾಗಿ ಇನ್ನೂ ಕೆಲವು ಪ್ರತ್ಯೇಕ ಟವರ್ ಅಳವಡಿಸಿಕೊಳ್ಳಿ ಜೊತೆಗೆ ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಳ್ಳುವಾಗ ಮರಗಳನ್ನು ಕಡಿದು ಅದನ್ನೇ ಅಲ್ಲಿಯೇ ಬಿಟ್ಟು ಹೋಗುತ್ತಿರಿ ಅದನ್ನು ಸ್ವಚ್ಚಗೊಳಿಸಬೇಕು ಎಂದರು.

ಅಡುಗೆ ಮನೆಯಲ್ಲಿ ಒಣ ಮತ್ತು ಹಸಿ ತ್ಯಾಜ್ಯಗಳಿಗೆ ಪ್ರತ್ಯೇಕವಾಗಿಡಬೇಕು. ಮನೆಯ ಉಳಿದ ಗೃಹ ತ್ಯಾಜ್ಯಗಳನ್ನು ಸಂಗ್ರಹಿಸಿಡಲು, ಅಂದರೆ ಕಾಗದ, ಪ್ಲಾಸ್ಟಿಕ್ ಇತ್ಯಾದಿಗಳಿಗೆ ಎರಡು ಚೀಲಗಳನ್ನು ಇರಿಸಿಕೊಳ್ಳಬೇಕು. ಅಡುಗೆ ಮನೆಯಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛವಾಗಿರಿಸಿ, ಒಣಗಿಸಿ, ನಂತರ ಒಣ ತ್ಯಾಜ್ಯ ಬಿನ್ ಗೆ ಹಾಕಿ. ಗಾಜು, ಪ್ಲಾಸ್ಟಿಕ್ ಪಾತ್ರೆಗಳಿಂದ ಆಹಾರ ಪದಾರ್ಥವನ್ನು ತೊಳೆದಿಡಿ. ಹಸಿ ತ್ಯಾಜ್ಯವನ್ನು ಪ್ರತಿನಿತ್ಯ ಮನೆಯಿಂದ ಹೊರಕ್ಕೆ ಕಳುಹಿಸಿ. ಒಣ ತ್ಯಾಜ್ಯವನ್ನು ಮನೆಯಲ್ಲಿ ಶೇಖರಿಸಿಕೊಂಡು ವಾರಕ್ಕೊಮ್ಮೆ ವಿಲೇವಾರಿ ಮಾಡಿ. ಸ್ಯಾನಿಟರಿ ತ್ಯಾಜ್ಯವನ್ನು ವಿಲೇವಾರಿ ಮಾಡಲು ಕಾಗದದ ಚೀಲಗಳನ್ನು ಬಳಸಲು ಜಾಗೃತಿ ಮೂಡಿಸಲು ತಿಳಿಸಿ ಪ್ರತ್ಯೇಕವಾಗಿ ಸಂಗ್ರಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಎಲ್ಡೆಕ್ಟ್ರಾನಿಕ್ಸ್, ಬ್ಯಾಟರಿ, ಬಲ್ಪ್ ಇವುಗಳನ್ನು ಸ್ಪೇಶಲ್ ಕೇರ್ ವೆಸ್ಟ್(ವಿಶೇಷ ಕಾಳಜಿ ತ್ಯಾಜ್ಯ)ಗಳನ್ನಾಗಿ ಬೇರ್ಪಡಿಸಬೇಕೆಂದರು.

ಪೌರಕಾರ್ಮಿಕ ಕೊರತೆ ಇರುವುದರಿಂದ ಕಸವಿಲೇವಾರಿ ಮಾಡಲು ಅನಾನೂಕೂಲವಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.

ನೂರಾನಿ ಶಾದಿಮಹಲ್ ಬಳಿ, ಇಮಾಮ್ ನಗರ, ಜಗಜೀವನ ರಾಂ ನಗರ, ಯರಗುಂಟೆ, ಇನ್ನೂ ಹಕ್ಕುಪತ್ರ ವಿತರಣೆಯಾಗಿರುವುದಿಲ್ಲ, ಈ ಬಗ್ಗೆ ಮಾಹಿತಿ ನೀಡಲು ತಿಳಿಸಿ ರಸ್ತೆಯ ಬದಿಗಳಲ್ಲಿ ಅನವಶ್ಯಕವಾಗಿ ಬೆಳೆದ ಮರಗಳನ್ನು ಕಡಿದು ಪುನಃ ಗಿಡಗಳನ್ನು ನೆಡುವಂತೆ ಅರಣ್ಯ ಇಲಾಖೆಯವರಿಗೆ ಸೂಚಿಸಿದರು.

ಈ ಸಭೆಯಲ್ಲಿ ಪಾಲಿಕೆ ಆಯುಕ್ತರಾದ ಮಹಾಂತೇಶ, ಜಲಸಿರಿ ಯೋಜನಾ ನಿರ್ದೇಶಕರಾದ ವಿರೇಂದ್ರ ಕುಂದಗೋಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Water: ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಜಿಲ್ಲೆಯ 103 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳಿಗೆ ಸಿಇಒ ಕಟ್ಟುನಿಟ್ಟಿನ ಸೂಚನೆ

ದಾವಣಗೆರೆ: (Water Crisis) ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆಯಲ್ಲಿ ಉದ್ಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಈ ನಿಟ್ಟಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ...

ರಾಜ್ಯ / ಕರ್ನಾಟಕ

DG&IGP: ಡಾ.ಎಂ.ಎ. ಸಲೀಂ ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿ ಮುಂದುವರಿಕೆ

ಬೆಂಗಳೂರು: (DG&IGP) ಕರ್ನಾಟಕ ಸರ್ಕಾರದ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಐನ್ಸ್‌ಪೆಕ್ಟರ್ ಜನರಲ್ (ಪೊಲೀಸ್ ಪಡೆಯ ಮುಖ್ಯಸ್ಥರು) ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಂ.ಎ. ಸಲೀಂ (IPS: 1993) ಅವರನ್ನು ಅದೇ ಹುದ್ದೆಯಲ್ಲಿ...

Related Articles
ದಾವಣಗೆರೆರಾಜ್ಯ / ಕರ್ನಾಟಕ

Transfer: ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆ: ದಾವಣಗೆರೆ ಜಿಲ್ಲೆಯ ವಿವರಗಳು

ದಾವಣಗೆರೆ: (Transfer) ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ರಾಜ್ಯದ ಹಲವು ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಇಂದು...

ದಾವಣಗೆರೆಅಪರಾಧರಾಜ್ಯ / ಕರ್ನಾಟಕ

Road: ರಸ್ತೆ ಸುರಕ್ಷತೆ ಮತ್ತು ಕಾನೂನುಬದ್ಧ ವಾಹನ ನಿರ್ವಹಣೆ. ದ್ವಿಚಕ್ರ ವಾಹನಗಳಿಗೆ ಸೀಮಿತವಾದ ತಪಾಸಣೆ.!

ದಾವಣಗೆರೆ: ( Road) ಭಾರತೀಯ ರಸ್ತೆಗಳಲ್ಲಿ ಸಂಚರಿಸುವ ಪ್ರತಿ ವಾಹನವು ನಿರ್ದಿಷ್ಟ ಸುರಕ್ಷತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ....

ದಾವಣಗೆರೆ

Corporation: ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳನ್ನು 7 ದಿನಗಳೊಳಗೆ ತೆರವುಗೊಳಿಸಸಲು ಪಾಲಿಕೆ ಆಯುಕ್ತರ ಆದೇಶ

ದಾವಣಗೆರೆ: (Corporation):  ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿತೆರವುಗೊಳಿಸಬೇಕು ಅಥವಾ ರಿಪೇರಿ ಮಾಡಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯನ್ವಯ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲವು ಕಟ್ಟಡಗಳು ಸಾರ್ವಜನಿಕರಿಗೆ ಹಾಗೂ ನೆರೆ-ಹೊರೆಯ ಆಸ್ತಿಪಾಸ್ತಿಗಳಿಗೆ ಅಪಾಯವನ್ನುಂಟು ಮಾಡುವ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸದರಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಅಥವಾ ಅದರ ಭಾಗದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿದಲ್ಲಿ ಅದಕ್ಕೆ ಸಂಬಂಧಪಟ್ಟ ಮಾಲೀಕರು ಅಥವಾ ಅನುಭೋಗದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಆ್ಯಕ್ಟ್ 1976ರ ಸೆಕ್ಷನ್ 322ರ ಅನ್ವಯ, ಮಾಲೀಕರು ತಕ್ಷಣವೇ ಕಟ್ಟಡದ ರಿಪೇರಿ/ತೆರವು ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಕಟ್ಟಡದ ಸುತ್ತಲೂ ಸುರಕ್ಷತಾ ಬೇಲಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಗದಿತ 07 ದಿನಗಳ ಅವಧಿಯೊಳಗೆ ಮಾಲೀಕರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಯಾವುದೇ ಪೂರ್ವಭಾವಿ ನೋಟೀಸ್ ನೀಡದೆ ಪಾಲಿಕೆ ವತಿಯಿಂದಲೇ ಸಂಪೂರ್ಣ ಕಟ್ಟಡ ಅಥವಾ ಅದರ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಮಾಲೀಕರು/ಅನುಭೋಗದಾರರಿಂದಲೇ ವಸೂಲಿ ಮಾಡಲಾಗುವುದು. ಇಂತಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಒಳಗೆ ಸಾರ್ವಜನಿಕರು ಪ್ರವೇಶಿಸಬಾರದು ಹಾಗೂ ಇಂತಹ ಅಪಾಯಕಾರಿ ಕಟ್ಟಡಗಳ ಸುತ್ತಮುತ್ತ ಸಂಚರಿಸುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್‌  ತಿಳಿಸಿದ್ದಾರೆ.

ದಾವಣಗೆರೆಅಪರಾಧ

PDS RICE: 6.14 ಲಕ್ಷ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ ಮತ್ತು ರಾಗಿ ವಶ; ಪೊಲೀಸರ ಭರ್ಜರಿ ಕಾರ್ಯಾಚರಣೆ

ದಾವಣಗೆರೆ:(PDS RICE) ಜಿಲ್ಲೆಯ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯಗಳನ್ನು ಸಾಗಿಸುತ್ತಿದ್ದ ಜಾಲವನ್ನು...