ದಾವಣಗೆರೆ

Samarth: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಾನವನ ಹೆಚ್ಚಿಸಲು ಸಮರ್ಥ್ ಶ್ಯಾಮನೂರು ಮಲ್ಲಿಕಾರ್ಜುನ್ ಸೂಚನೆ

Share
Share

ದಾವಣಗೆರೆ: (Samarth) ದಾವಣಗೆರೆ ದಕ್ಷಿಣ ಕ್ಚೇತ್ರದಲ್ಲಿ ಹೆಚ್ಚು ಉದ್ಯಾನವನಗಳನ್ನು ನಿರ್ಮಿಸುವ ಜೊತೆಗೆ ಜನಪ್ರತಿನಿಧಿಗಳಿಗೆ ಮನವರಿಕೆ ಆಗುವಂತೆ ಕಾಮಗಾರಿಗಳ ವಿವರಣೆ ನೀಡಬೇಕೆಂದು ಅಧಿಕಾರಿಗಳಿಗೆ ಶಾಸಕರಾದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಸೂಚನೆ ನೀಡಿದರು.

ಮಹಾನಗರಪಾಲಿಕೆ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳ ವಿವರಗಳನ್ನು ಸಾರ್ವಜನಿಕರಿಗೆ ಅರ್ಥವಾಗುವ ರೀತಿಯಲ್ಲಿ ನೀಡಬೇಕು ಎಂದರು.

ಜಲಸಿರಿಯಡಿ ನಲ್ಲಿ ಸಂಪರ್ಕ ಅಳವಡಿಸಿದ ಕೆಲವು ಮನೆಗಳಿಗೆ ದುಬಾರಿ ಮೊತ್ತದ ನೀರಿನ ಬಿಲ್ ಬರುತ್ತಿರುವುದರಿಂದ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಶಿವನಗರದಲ್ಲಿ ಜಲಸಿರಿ ಸಂಪರ್ಕವು ಇನ್ನೂ ಆಗಿಲ್ಲ. ಜಲಸಿರಿ ಯೋಜನೆಯಲ್ಲಿನ ಸಮಸ್ಯೆಗಳು ಮತ್ತು ವಿಳಂಬದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ವಿಳಂಬ, ಅನಿಯಮಿತ ನೀರು ಸರಬರಾಜು ಮತ್ತು ದುಬಾರಿ ಬಿಲ್ ಅಂತಹ ದೂರುಗಳ ಬಗ್ಗೆ ಜನಪ್ರತಿನಿಧಿಗಳಿಗೆ ಪಾಲಿಕೆ ಅಧಿಕಾರಿಗಳು ಕೂಡಲೇ ಉತ್ತರ ನೀಡುವಂತೆ ತಿಳಿಸಿದರು.

ಕುಡಿಯುವ ನೀರು, ಸ್ವಚ್ಛತೆ ಮತ್ತು ರಸ್ತೆಗಳಂತಹ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ದಾವಣಗೆರೆ ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ಸ್ಮಾರ್ಟ್ ಸಿಟಿ ಹಾಗೂ ಪಾಲಿಕೆಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಬೇಕೆಂದರು.

*ಬೆಸ್ಕಾಂ* : ಬೆಸ್ಕಾಂ ಸಹಾಯವಾಣಿಗೆ ಬರುವ ಕರೆಗಳ ಮೂಲಕ ಸಮಸ್ಯೆಗಳನ್ನು ಹೇಗೆ ಪರಿಹರಿಸುತ್ತೀರಿ ಎಂಬುದನ್ನು ವಿವರವಾಗಿ ತಿಳಿಸಿ ಎಂದ ಅವರು ಮತ್ತು ಮುಂದಿನ ದಿನಗಳಲ್ಲಿ ಬರುವ ಗಣೇಶ ಚತುರ್ಥಿ ಹಬ್ಬಕ್ಕೆ ರಸ್ತೆಯಲ್ಲಿರುವ ವಿದ್ಯುತ್ ಕಂಬ, ತಂತಿಗಳನ್ನು ಕೂಡಲೇ ಸರಿಪಡಿಸಿಬೇಕೆಂದರು.

ದಾವಣಗೆರೆ ನಗರದಲ್ಲಿ ಏಕಕಾಲಕ್ಕೆ ವಿದ್ಯುತ್ ಕಡಿತಗೊಳಿಸಬಾರದು, ಹಂತ ಹಂತವಾಗಿ ವಿದ್ಯುತ್ ಕಡಿತಗೊಳಿಸಿ ಇದಕ್ಕಾಗಿ ಇನ್ನೂ ಕೆಲವು ಪ್ರತ್ಯೇಕ ಟವರ್ ಅಳವಡಿಸಿಕೊಳ್ಳಿ ಜೊತೆಗೆ ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಳ್ಳುವಾಗ ಮರಗಳನ್ನು ಕಡಿದು ಅದನ್ನೇ ಅಲ್ಲಿಯೇ ಬಿಟ್ಟು ಹೋಗುತ್ತಿರಿ ಅದನ್ನು ಸ್ವಚ್ಚಗೊಳಿಸಬೇಕು ಎಂದರು.

ಅಡುಗೆ ಮನೆಯಲ್ಲಿ ಒಣ ಮತ್ತು ಹಸಿ ತ್ಯಾಜ್ಯಗಳಿಗೆ ಪ್ರತ್ಯೇಕವಾಗಿಡಬೇಕು. ಮನೆಯ ಉಳಿದ ಗೃಹ ತ್ಯಾಜ್ಯಗಳನ್ನು ಸಂಗ್ರಹಿಸಿಡಲು, ಅಂದರೆ ಕಾಗದ, ಪ್ಲಾಸ್ಟಿಕ್ ಇತ್ಯಾದಿಗಳಿಗೆ ಎರಡು ಚೀಲಗಳನ್ನು ಇರಿಸಿಕೊಳ್ಳಬೇಕು. ಅಡುಗೆ ಮನೆಯಲ್ಲಿ ಉತ್ಪತ್ತಿಯಾಗುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛವಾಗಿರಿಸಿ, ಒಣಗಿಸಿ, ನಂತರ ಒಣ ತ್ಯಾಜ್ಯ ಬಿನ್ ಗೆ ಹಾಕಿ. ಗಾಜು, ಪ್ಲಾಸ್ಟಿಕ್ ಪಾತ್ರೆಗಳಿಂದ ಆಹಾರ ಪದಾರ್ಥವನ್ನು ತೊಳೆದಿಡಿ. ಹಸಿ ತ್ಯಾಜ್ಯವನ್ನು ಪ್ರತಿನಿತ್ಯ ಮನೆಯಿಂದ ಹೊರಕ್ಕೆ ಕಳುಹಿಸಿ. ಒಣ ತ್ಯಾಜ್ಯವನ್ನು ಮನೆಯಲ್ಲಿ ಶೇಖರಿಸಿಕೊಂಡು ವಾರಕ್ಕೊಮ್ಮೆ ವಿಲೇವಾರಿ ಮಾಡಿ. ಸ್ಯಾನಿಟರಿ ತ್ಯಾಜ್ಯವನ್ನು ವಿಲೇವಾರಿ ಮಾಡಲು ಕಾಗದದ ಚೀಲಗಳನ್ನು ಬಳಸಲು ಜಾಗೃತಿ ಮೂಡಿಸಲು ತಿಳಿಸಿ ಪ್ರತ್ಯೇಕವಾಗಿ ಸಂಗ್ರಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ಎಲ್ಡೆಕ್ಟ್ರಾನಿಕ್ಸ್, ಬ್ಯಾಟರಿ, ಬಲ್ಪ್ ಇವುಗಳನ್ನು ಸ್ಪೇಶಲ್ ಕೇರ್ ವೆಸ್ಟ್(ವಿಶೇಷ ಕಾಳಜಿ ತ್ಯಾಜ್ಯ)ಗಳನ್ನಾಗಿ ಬೇರ್ಪಡಿಸಬೇಕೆಂದರು.

ಪೌರಕಾರ್ಮಿಕ ಕೊರತೆ ಇರುವುದರಿಂದ ಕಸವಿಲೇವಾರಿ ಮಾಡಲು ಅನಾನೂಕೂಲವಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು.

ನೂರಾನಿ ಶಾದಿಮಹಲ್ ಬಳಿ, ಇಮಾಮ್ ನಗರ, ಜಗಜೀವನ ರಾಂ ನಗರ, ಯರಗುಂಟೆ, ಇನ್ನೂ ಹಕ್ಕುಪತ್ರ ವಿತರಣೆಯಾಗಿರುವುದಿಲ್ಲ, ಈ ಬಗ್ಗೆ ಮಾಹಿತಿ ನೀಡಲು ತಿಳಿಸಿ ರಸ್ತೆಯ ಬದಿಗಳಲ್ಲಿ ಅನವಶ್ಯಕವಾಗಿ ಬೆಳೆದ ಮರಗಳನ್ನು ಕಡಿದು ಪುನಃ ಗಿಡಗಳನ್ನು ನೆಡುವಂತೆ ಅರಣ್ಯ ಇಲಾಖೆಯವರಿಗೆ ಸೂಚಿಸಿದರು.

ಈ ಸಭೆಯಲ್ಲಿ ಪಾಲಿಕೆ ಆಯುಕ್ತರಾದ ಮಹಾಂತೇಶ, ಜಲಸಿರಿ ಯೋಜನಾ ನಿರ್ದೇಶಕರಾದ ವಿರೇಂದ್ರ ಕುಂದಗೋಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Hara: ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ವಚನಾನಂದ ಶ್ರೀಗಳ ಉಚ್ಚಾಟನೆ – ಏಪ್ರಿಲ್ 27ಕ್ಕೆ ಬಹಿರಂಗ ಲೆಕ್ಕಕ್ಕೆ ಟ್ರಸ್ಟ್ ಸಿದ್ಧ

ದಾವಣಗೆರೆ:(Hara) ಹರಿಹರದ ಪಂಚಮಸಾಲಿ ಪೀಠದಲ್ಲಿ ಉಂಟಾಗಿರುವ ಭಿನ್ನಮತ ಈಗ ಬಹಿರಂಗ ಸಂಘರ್ಷಕ್ಕೆ ನಾಂದಿ ಹಾಡಿದೆ. ಮಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಹಾಗೂ ಟ್ರಸ್ಟಿ ಚಂದ್ರಶೇಖರ್ ಪೂಜಾರ್ ಅವರು ಹರಿಹರ ಪೀಠದ...

ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ...

Related Articles
ಅಪರಾಧದಾವಣಗೆರೆರಾಜ್ಯ / ಕರ್ನಾಟಕ

PSI: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪಾನಮತ್ತ ಮಹಿಳೆ.!

ದಾವಣಗೆರೆ: (PSI) ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಪಾನಮತ್ತ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಅಸಭ್ಯವಾಗಿ...

ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು...

ದಾವಣಗೆರೆಅಪರಾಧ

Matka: ದಾವಣಗೆರೆ – ಹರಿಹರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಕೆ.ಎಸ್. ಭಗವಾನ್ ಹೇಳಿಕೆ ವಿರುದ್ಧ ಶಾಸಕ ಬಿ.ಪಿ. ಹರೀಶ್ ಕಿಡಿ

ದಾವಣಗೆರೆ:(Matka) ಜಿಲ್ಲೆ ಹಾಗೂ ಹರಿಹರ ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು, ಇತ್ತೀಚೆಗೆ ನಡೆದ ವಿವಾದಾತ್ಮಕ...