ಸಂಧ್ಯಾ ಸುರಕ್ಷಾ, ವಿಧವಾ ವೇತನ, ದಿವ್ಯಾಂಗ ಚೇತನ ವೇತನ ಹೆಚ್ಚಿಸಿದ ನೂತನ ಸಿಎಂ ಬೊಮ್ಮಾಯಿ

ಬೆಂಗಳೂರು:ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹೊಸ ಶಿಷ್ಯವೇತನ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಘೋಷಿಸಿದ್ದಾರೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಈ ಹೊಸ ಯೋಜನೆಯ ಬಗ್ಗೆ ಘೋಷಿಸಿದ್ದಾರೆ
ಈಗ ಜಾರಿಯಲ್ಲಿರುವ ಸಂಧ್ಯಾಸುರಕ್ಷ ಗೌರವಧನವನ್ನು 1000 ರೂ ದಿಂದ 1200ರೂ ಗಳವರೆಗೆ ಹೆಚ್ಚಳ, ವಿಧವಾ ವೇತನ ಹಾಗೂ ದಿವ್ಯಾಂಗ ಚೇತನರಿಗೆ 600ರೂ ದಿಂದ 800 ರೂ,ಗೆ ಹೆಚ್ಚಳ ಮಾಡಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ
ಪ್ರವಾಹ ಪೀಡಿತ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಇದೇ ತಿಂಗಳು 29ರಂದು ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು