ಶಾಲಾ ಬಸ್ ಮರಕ್ಕೆ ಡಿಕ್ಕಿ.! 7 ಜನರಿಗೆ ತೀವ್ರವಾದ ಪೆಟ್ಟು.!

ಜಗಳೂರು: ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಒಟ್ಟು 7 ಜನ ವಿದ್ಯಾರ್ಥಿಗಳು
ಗಂಭೀರ ಗಾಯಗೊಂಡಿರುವ ಘಟನೆ ಜಗಳೂರು ತಾಲೂಕಿನ ರಸ್ತೆಮಾಚಿಕೇರೆ ಸಮೀಪ ಶನಿವಾರ ಮಧ್ಯಾಹ್ನದಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಎನ್.ಎಂ.ಕೆ . ಖಾಸಗಿ ಶಾಲೆಯ ಬಸ್ ಆಗಿದ್ದು ಎಂದಿನಂತೆ ಶಾಲಾ ಮಕ್ಕಳಿಗೆ ದೇವಿಕೇರೆ ಗ್ರಾಮಕ್ಕೆ ತೆರಳುತಿದ್ದ ವೇಳೆ ರಸ್ತೆಮಾಚೀಕೆರೆ ಬಗ್ಗೇನಹಳ್ಳಿ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಗಾಯಳುಗಳನ್ನು ಪಟ್ಟಣದ ಸರ್ವಜನಿಕ ಆಸ್ಪತ್ರೆ ಹಾಗೂ ಕೆಲ ವಿದ್ಯಾರ್ಥಿಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದರೆ.
ಈ ಘಟನ ಜಗಳೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಸಿಪಿಐ ಶ್ರೀನಿವಾಸ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.