ಶಾಲೆ ಸ್ಚಚ್ಚತೆ ಮಾಡಿ ಮಾದರಿಯಾದ ಹಿಂಡಸಘಟ್ಟ ಗ್ರಾ.ಪಂ
![](https://garudavoice.com/wp-content/uploads/2021/06/hindasgatta_school_clean1.jpg)
ದಾವಣಗೆರೆ: ರಾಜ್ಯ ಸರ್ಕಾರ ಜು.1 ರಿಂದ ಶಾಲೆಗಳನ್ನು ಪ್ರಾರಂಭಿಸಲು ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಮಕ್ಕಳ ದಾಖಲಾತಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಹಿಂಡಸಘಟ್ಟ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯನ್ನು ಗ್ರಾಮಪಂಚಾಯಿತಿ ಸದಸ್ಯರೇ ಖುದ್ದು ಮುಂದೆ ನಿಂತು ಸ್ಯಾನಿಟೈಸ್ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.ಮಕ್ಕಳ ಆರೋಗ್ಯದ ದೃಷ್ಟಿಯಿಂದ, ಗ್ರಾಪಂ ಸದಸ್ಯರು ಶಾಲೆಗಳ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಿ, ಶಾಲೆಯನ್ನು ಸ್ಯಾನಿಟೈಸ್ ಮಾಡಲು ಕೈಜೋಡಿಸಿದ್ದು, ಇದಕ್ಕೆ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ನಾಗರಾಜ್ ನಾಯ್ಕ್ ಕೂಡ ಸಹಕರಿಸಿದ್ದಾರೆ.
ಈ ಸಂದರ್ಭದಲ್ಲಿ ವಾಸನ ಗ್ರಾಪಂ ಪಿಡಿಓ ಈರಣ್ಣ, ಗ್ರಾಮ ಪಂಚಾಯತಿ ಸದಸ್ಯ ಹರೀಶ್, ಶಾಲಾ ಮುಖ್ಯ ಶಿಕ್ಷಕರಾದ ಬಿ. ಅರುಣ್ ಹಾಗೂ ಸಹ ಶಿಕ್ಷಕಿ ಹೆಚ್.ಆರ್. ಲಕ್ಷ್ಮೀದೇವಿ ಉಪಸ್ಥಿತರಿದ್ದರು.