ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್ಡಿಎ ಮತ್ತು ಬೆರಳಚ್ಚುಗಾರರ ವರ್ಗಾವಣೆ! ದಾವಣಗೆರೆ ಸೇರಿದಂತೆ ಯಾವ್ಯಾವ ಜಿಲ್ಲೆಗಳಲ್ಲಿ ವರ್ಗಾವಣೆಯಾಗಿದ್ದಾರೆ ನೋಡಿ.!

ದಾವಣಗೆರೆ: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕೇತರ ದ್ವಿತೀಯ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕ ಸಹಿತ ಬೆರಳಚ್ಚುಗಾರರು ವೃಂದದ 48 ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಜೂನ್ 2ರ 2022ರಂದು ಆದೇಶಿಸಿ ಅಧಿಕೃತ ಜ್ಞಾಪನ ಹೊರಡಿಸಿದೆ.
ಅದರಂತೆ ದಾವಣಗೆರೆ ಜಿಲ್ಲೆ, ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ದ್ವಿತೀಯ ದರ್ಜೆ ಸಹಾಯಕ ಸಂತೋಷ್ ಎಸ್.ಸಿ ಇವರನ್ನು ಚನ್ನಗಿರಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಗತ್ತೂರಿಗೆ ವರ್ಗಾಯಿಸಲಾಗಿದೆ. ಚನ್ನಗಿರಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ, ಕಗತ್ತೂರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರಾದ ಮಂಜುಳಾ ಕೆ., ಇವರನ್ನು ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆ, ಇಲ್ಲಿ (ಸಂತೋಷ್ ಎಸ್.ಸಿ ಅವರ ಜಾಗಕ್ಕೆ) ವರ್ಗಾಯಿಸಲಾಗಿದೆ.
ಇದೇರೀತಿ ಶಿವಮೊಗ್ಗ, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಉಡುಪಿ, ಕೊಪ್ಪಳ, ಕೊಡಗು, ರಾಯಚೂರು, ಬಳ್ಳಾರಿ ಸೇರಿದಂತೆ ಇತ್ಯಾದಿ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಬೋಧಕೇತರ ದ್ವಿತೀಯ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕ ಸಹಿತ ಬೆರಳಚ್ಚುಗಾರರು ವೃಂದದ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
garudavoice21@gmail.com 9740365719