ಫೆ.19ರಂದು ಶಿವಛತ್ರಪತಿ ಶಿವಾಜಿ ಮಹರಾಜರ ಜಯಂತಿ
![](https://garudavoice.com/wp-content/uploads/2023/02/IMG-20230217-WA0008-1024x498.jpg)
ಶಿವಛತ್ರಪತಿ ಶಿವಾಜಿ
ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಕೃಷ್ಣಾಭವಾನಿ ಕಲ್ಯಾಣ ಮಂಟಪದಲ್ಲಿ ಶ್ರೀ ಶಿವಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಆಚರಿಸಲಾಗುತ್ತಿದೆ ಎಂದು ಕ್ಷೇತ್ರಿಯ ಮರಾಠ ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.
ಇದೇ ಫೆ. 19ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಶ್ರೀ ಶಿವಛತ್ರಪತಿ ಶಿವಾಜಿ ಮಹಾರಾಜರ 396ನೇ ಜಯಂತ್ಯುತ್ಸವ ನಡೆಯಲಿದ್ದು, ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ದುರ್ಗಾಂಭಿಕಾ ವೃತ್ತದಲ್ಲಿನ ಶಿವಾಜಿ ಪುತ್ಥಳಿಕೆ ಜಿಲ್ಲಾಧಿಕಾರಿಗಳು ಮಾಲಾರ್ಪಣೆ ಮಾಡಲಿದ್ದಾರೆ ಎಂದರು.
ಶಿವಾಜಿ ಜಯಂತಿಗೆ ಆಚರಣೆಗೆ ಸರ್ಕಾರ ಜಿಲ್ಲಾ ಕೇಂದ್ರಕ್ಕೆ 50 ಸಾವಿರ ರೂ. ಹಾಗೂ ತಾಲ್ಲೂಕು ಕೇಂದ್ರಕ್ಕೆ 25 ಸಾವಿರ ರೂ. ನೀಡುತ್ತಿದ್ದು, ಈ ಅಲ್ಪ ಮೊತ್ತ ಯಾವುದಕ್ಕೂ ಸಾಕಾಗುತ್ತಿಲ್ಲ. ಕಾರಣ, ಕನಿಷ್ಟ ಜಿಲ್ಲಾ ಕೇಂದ್ರಕ್ಕೆ 3 ಲಕ್ಷ ರೂ. ಹಾಗೂ ತಾಲ್ಲೂಕು ಕೇಂದ್ರಕ್ಕೆ 1.50 ಲಕ್ಷ ರೂ. ಅನುದಾನ ನೀಡುವಂತೆ ಜಾಧವ್ ಒತ್ತಾಯಿಸಿದರು.
ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿರುವ ಷಹಾಜಿ ರಾಜೆ ಬೋಸ್ಲೆಯವರ ಸಮಾಧಿ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿವಿರ ಘೋಷಿಸಿದ್ದು, ಮರಾಠ ಸಮಾಜದ ಪರವಾಗಿ ಅಭಿನಂದಿಸಲಾಗುವುದು ಎಂದರು.