siddaramaiah; ಬಸವರಾಜ ಬೊಮ್ಮಾಯಿಯವರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು, ಅ.21: ಮೊಣಕಾಲು ನೋವು ಸಂಬಂಧ ಫೋರ್ಟಿಸ್ ಆಸ್ಪತ್ರೆಗೆ ದಾಖಲಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಸ್ಪತ್ರೆಗೆ ದಾಖಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಇಂದು ಆರೋಗ್ಯ ವಿಚಾರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.

lokayukta; ಭ್ರಷ್ಟರಿಗೆ ಸಿಂಹ ಸ್ವಪ್ನವಾದ ಲೋಕಾಯುಕ್ತ ಎಸ್ ಪಿ ಕೌಲಾಪುರೆ

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಮೊಣಕಾಲು ನೋವಿನಿಂದ ಬಳಸಲುತ್ತಿದ್ದು, ಈ ಹಿಂದೆಯೂ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಮೊಣಕಾಲು ನೋವು ಹೆಚ್ಚಾದ ಕಾರಣ ವೈದ್ಯರ ಸಲಹೆಯ ಮೇರೆಗೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದರು.

Leave a Reply

Your email address will not be published. Required fields are marked *

error: Content is protected !!