ಸಿದ್ದರಾಮಯ್ಯನವರೇ ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳಿ – ಗೋವಿಂದ ಕಾರಜೋಳ

ಬೆಂಗಳೂರು: ಮೇಕೆದಾಟು ಯೋಜನೆ ಶೀಘ್ರ ಕಾಮಗಾರಿ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಶುರುವಾತಿನಲ್ಲಿಯೇ ವಿಘ್ನ ಕಾಣಿಸಿದೆ.

ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು, ನಾಲ್ಕೈದು ಮೀಟರ್‌ ಕ್ರಮಿಸುತ್ತಲೇ ಅವರಿಗೆ ಸುಸ್ತಾಗಿದ್ದ ಕಾರಣ ವೈದ್ಯರು ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ‌ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಗೋವಿಂದ ಕಾರಜೋಳ ‘ನನಗೆ ಕಳವಳ ಆಗಿದೆ. ಸಿದ್ದರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ. ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!