ಸಿನಿಮಾ

ಸಿಂಗಾರ ಸಿರಿಯೇ, ಚುಟು ಚುಟು ಕೋರಿಯೋಗ್ರಫರ್..ಹೀರೋ ಆದ ಭೂಷಣ್ ಮಾಸ್ಟರ್ ಈಗ ಡೈರೆಕ್ಟರ್…

ಸಿಂಗಾರ ಸಿರಿಯೇ, ಚುಟು ಚುಟು, ಕೋರಿಯೋಗ್ರಫರ್,ಹೀರೋ, ಭೂಷಣ್, ಮಾಸ್ಟರ್, ಡೈರೆಕ್ಟರ್,

 ಬೆಂಗಳೂರು: ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ ಕೋರಿಯೋಗ್ರಾಫರ್ ಆಗಿ ದುಡಿದಿರುವ ಭೂಷಣ್, ರಾಜ ರಾಣಿ ರೋರರ್ ರಾಕೆಟ್ ಸಿನಿಮಾ ಮೂಲಕ ಹೀರೋ ಆಗಿ ಭರವಸೆ ಮೂಡಿಸಿದ್ದಾರೆ.

ಈಗ ಭೂಷಣ್ ಮಾಸ್ಟರ್ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ನೃತ್ಯ‌ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. ಇಂದು ಅವರ ಹುಟ್ಟುಹಬ್ಬ. ಜನ್ಮದಿನದ ವಿಶೇಷವಾಗಿ ತಮ್ಮ ಮುಂದಿನ ನಡೆ ಬಗ್ಗೆ ಸಣ್ಣ ವಿಡಿಯೋ ತುಣುಕಿನ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

Most Popular

To Top