ಸ್ಲಂ ಪ್ರದೇಶದ 9 ಸಾವಿರ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ – ವಸತಿ ಸಚಿವ ವಿ ಸೋಮಣ್ಣ

ದಾವಣಗೆರೆ: ಪ್ರಸಕ್ತ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು ನಾಲ್ಕು ಲಕ್ಷ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಟ 50 ಮನೆಗಳನ್ನು ಮಂಜೂರು ಮಾಡಲಾಗುವುದು, ಜಾತಿ ಬೇಧವಿಲ್ಲದೆ ಅರ್ಹರಿಗೆ ಮಾತ್ರ ಮನೆ ಮಂಜೂರಾತಿಗೆ ಫಲಾನುಭವಿಗಳನ್ನು ಗುರುತಿಸುವಂತೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ವಿ. ಸೋಮಣ್ಣ ಅವರು ಶಾಸಕರುಗಳಿಗೆ ಹೇಳಿದರು.
ವಸತಿ ಯೋಜನೆಗಳಿಗೆ ಸಂಬAಧಿಸಿದAತೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯತಿಗೆ ತಲಾ 20 ಮನೆಗಳನ್ನು ಮಂಜೂರು ಮಾಡಲಾಗಿತ್ತು. ಈ ವರ್ಷ ಬಸವ ವಸತಿ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 04 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗುತ್ತಿದ್ದು, ಪ್ರತಿ ಗ್ರಾಮ ಪಂಚಾಯತಿಗೆ ಕನಿಷ್ಟ 40 ರಿಂದ 50 ಮನೆಗಳನ್ನು ಮಂಜೂರು ಮಾಡಲಾಗುವುದು.
ಜಾತಿ ವರ್ಗಗಳ ಬೇಧವಿಲ್ಲದೆ, ಸೂರು ರಹಿತ ಹಾಗೂ ಅವಶ್ಯಕತೆ ಇರುವಂತಹ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಈಗಾಗಲೆ ಬೇರೆ ಯೋಜನೆಯಡಿ ಆಯ್ಕೆಯಾದಂತಹವರಿಗೆ, ಅಥವಾ ಅವಶ್ಯಕತೆ ಇಲ್ಲದವರಿಗೆ ಮನೆ ನೀಡಬಾರದು. ಪಾರದರ್ಶಕತೆಗೆ ಯಾವುದೇ ಅಪಚಾರವಾಗದ ರೀತಿಯಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಆಯಾ ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಬೇಕು ಎಂದರು.
ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ವಸತಿ ರಹಿತರಿಗಾಗಿ ಈ ವರ್ಷ 70 ಎಕರೆ ಭೂಮಿ ಖರೀದಿಗೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಅನುಮೋದನೆ ನೀಡಲಾಗುವುದು. ಆದರೆ ಭೂಮಿಗೆ ಸರ್ಕಾರದ ನಿಯಮಾನುಸಾರ ದರ ನಿಗದಿಪಡಿಸಲಾಗುವುದು. ಭೂಮಾಲೀಕರು ಹೆಚ್ಚಿನ ದರ ಕೇಳಿದರೆ ಕೊಡಲು ಆಗುವುದಿಲ್ಲ, ಈ ಬಗ್ಗೆ ಮದ್ಯವರ್ತಿಗಳ ಅವಶ್ಯಕತೆ ಇಲ್ಲ, ರಾಜ್ಯದಲ್ಲಿ ಭೂಮಿ ನೀಡಿಕೆಗೆ ಸಂಬAಧಿಸಿದAತೆ ಮದ್ಯವರ್ತಿಗಳ ಹಾವಳಿಯನ್ನು ತಡೆಗಟ್ಟಲಾಗಿದೆ ಎಂದು ವಸತಿ ಸಚಿವರು ಹೇಳಿದರು.
ಸ್ಲಂ ಪ್ರದೇಶದ 9 ಸಾವಿರ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ದಾವಣಗೆರೆ ದಕ್ಷಿಣ ಮತ್ತು ದಾವಣಗೆರೆ ಉತ್ತರ, ಚನ್ನಗಿರಿ, ಹೊನ್ನಾಳಿ, ಜಗಳೂರು ಹಾಗೂ ಹರಿಹರ ಸೇರಿದಂತೆ ಒಟ್ಟು 06 ನಗರ, ಪಟ್ಟಣ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 68 ಘೋಷಿತ ಕೊಳಚೆ ಪ್ರದೇಶಗಳಿದ್ದು, 11546 ಕುಟುಂಬಗಳು ವಾಸವಾಗಿವೆ. ಕೊಳಗೇರಿ ಪ್ರದೇಶದ ನಿವಾಸಿಗಳ ಪೈಕಿ ಈ ವರ್ಷ 9000 ಕುಟುಂಬಗಳಿಗೆ ಒಟ್ಟು 170 ಎಕರೆ ಪ್ರದೇಶದಲ್ಲಿ ನಿವೇಶನಗಳನ್ನು ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳನ್ನು ಜಿಲ್ಲೆಗೆ ಕರೆಯಿಸಿ, ಈ ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಈಗಾಗಲೆ 1303 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, 3376 ಮನೆಗಳು ವಿವಿಧ ಹಂತಗಳಲ್ಲಿವೆ. ಈ ವರ್ಷ ರಾಜ್ಯದಲ್ಲಿ ಘೋಷಿತ ಕೊಳಗೇರಿ ಪ್ರದೇಶಗಳ ಕುಟುಂಬಗಳಿಗೆ ಇನ್ನೂ 50 ಸಾವಿರ ಮನೆಗಳನ್ನು ನೀಡುತ್ತೇವೆ, ಮೂಲ ಸೌಕರ್ಯಕ್ಕಾಗಿ 500 ಕೋಟಿ ರೂ. ಅನುದಾನ ಒದಗಿಸಿದ್ದೇವೆ. ಅಲೆಮಾರಿ, ಅರೆ ಅಲೆಮಾರಿ, ಸುಡುಗಾಡು ಸಿದ್ಧರು, ಕಾಡುಗೊಲ್ಲರು, ಬುಡಬುಡಿಕೆ ಸಮುದಾಯದವರು ತಮ್ಮ ಜೀವನದಲ್ಲಿ ಸಾಕಷ್ಟು ಅಲೆದಾಡಿದ್ದು, ಅವರ ನೆಮ್ಮದಿಯ ಬದುಕಿಗಾಗಿ, ಇಂತಹ ಸಮುದಾಯದವರಿಗೂ ಮನೆಗಳನ್ನು ನಿರ್ಮಿಸಿಕೊಡಲು ಇಲಾಖೆ ಮುಂದಾಗಿದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮಾತನಾಡಿ, ಜಿಲ್ಲೆಯಲ್ಲಿ ವಸತಿ ರಹಿತರಿಗಾಗಿ ಮನೆ ನಿರ್ಮಿಸಲು ಒಟ್ಟು 173 ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸಿದ್ದೇವೆ. ಅಲ್ಲದೆ ಒಟ್ಟು 277 ಎಕರೆ ಪ್ರದೇಶದಲ್ಲಿ ಲೇಔಟ್ ರಚನೆಗಾಗಿ ಹಣ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸಂಸದ ಜಿ.ಎಂ. ಸಿದ್ಧೇಶ್ವರ ಮಾತಮಾಡಿ, ಇ.ಒ ಗಳು ನಿಜವಾದ ನಿರಾಶ್ರಿತರನ್ನು ಗುರುತಿಸಿ ಸಮರ್ಪಕವಾಗಿ ಮನೆ ನೀಡಬೇಕು. ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಮನೆ ನೀಡಲು ಲಂಚ ಪಡೆಯುತ್ತಾರೆ ಎಂಬ ದೂರುಗಳು ಕೇಳಿಬರುತ್ತಿವೆ, ಹೀಗಾಗಿ ಮನೆ ವಿತರಣೆಯಲ್ಲಿ ಅಕ್ರಮ ಕಂಡುಬAದಲ್ಲಿ ಕ್ರಿಮಿನಲ್ ದಾವೆ ಹೂಡಲಾಗುತ್ತದೆ. ಗ್ರಾಮದಲ್ಲಿ ಸೈಟ್ ಖರೀದಿಸಿ ವಸತಿರಹಿತರಿಗೆ ನೀಡಬೇಕು. ಈಗಾಗಲೆ ಕಾಮಗಾರಿ ಹಂತದಲ್ಲಿರುವ ಹಾಗೂ ಬ್ಲಾಕ್ ಆಗಿರುವ 1346 ಮನೆಗಳನ್ನು ಅನ್ಬ್ಲಾಕ್ ಮಾಡಿ ಹಣ ಬಿಡುಗಡೆ ಮಾಡಬೇಕು ಎಂದರು.
ಉತ್ತರ ಶಾಸಕ ಎಸ್.ಎ.ರವೀಂದ್ರನಾಥ ಮಾತನಾಡಿ, ಸತತ ಮೂರು ನಾಲ್ಕು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿ ಕುಂಟಿತವಾಗಿದೆ. ಕ್ಷೇತ್ರದಲ್ಲಿ 25 ಸಾವಿರ ಕುಟುಂಬಗಳಿಗೆ ನಿವೇಶದ ಅಗತ್ಯವಿದೆ. ಇದಕ್ಕಾಗಿ ಸುಮಾರು 180 ಎಕರೆ ಭೂಮಿಯ ಅಗತ್ಯವಿದ್ದು, ಮಂಜೂರು ಮಾಡಬೇಕು, ಅಧಿಕಾರಿಗಳು ಬಾಕಿ ಇರುವ ಮನೆ ಕಂತು ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದರು.
ಸಭೆಯಲ್ಲಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿ ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾ ಪಂಚಾಯತ್ ಸಿಇಓ ವಿಜಯ ಮಹಾಂತೇಶ್ ದಾನಮ್ಮನವರ್, ಗೃಹಮಂಡಳಿ, ನಗರಾಭಿವೃದ್ಧಿ ಕೋಶದ ಅಧಿಕಾರಿಗಳು, ತಾ.ಪಂ. ಇಒ ಉಪಸ್ಥಿತರಿದ್ದರು.