ದಾವಣಗೆರೆ

MLA: ಕುಡಿಯುವ ನೀರು ಮತ್ತು ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಿ: ಶಾಸಕ ಸಮರ್ಥ್‌ ಶಾಮನೂರು.

Share
Share

ದಾವಣಗೆರೆ (MLA):  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ  ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ್‌ ಶಾಮನೂರು ಮಲ್ಲಿಕಾರ್ಜುನ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಕಚೇರಿ ಅಮೃತ ಮಹೋತ್ಸವ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಮತ್ತು ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ, ಮುದಹದಡಿ, ಕೈದಾಳೆ, ಕುಕ್ಕೆವಾಡ, ಕುರ್ಕಿ, ಬೆಳಗುರು, ಶಿರಮಗೊಂಡನಹಳ್ಳಿ ಮತ್ತು ಕನಗೊಂಡನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಒಳಪಡುವ  ಗ್ರಾಮಗಳಲ್ಲಿ ಕಾಮಗಾರಿಗಳು, ಕುಡಿಯುವ ನೀರು ಸರಬರಾಜು, ರಸ್ತೆ, ಚರಂಡಿ,  ಸ್ಮಶಾಣ, ಸೇರಿದಂತೆ ಮೂಲಭೂತ ಸೌಲಭ್ಯಗಳ  ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ‘ಜಲ ಜೀವನ್ ಮಿಷನ್’ (JJM) ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಮನೆಗಳ ಮುಂದೆ ನಳಗಳಿಗೆ ನೀರು ಬರುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಬಗ್ಗೆ ಅಧಿಕಾರಿಗಳು ತಕ್ಷಣ ಗಮನಹರಿಸಿ, ಹೊಸ ಬೋರ್‌ವೆಲ್‌ಗಳನ್ನು ಕೊರೆಸಲು ಹಾಗೂ ನೀರಿನ ಟ್ಯಾಂಕ್‌ಗಳ ವ್ಯವಸ್ಥೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೈದಾಳ್ ಕ್ಯಾಂಪ್‌ನಲ್ಲಿ ಸ್ಮಶಾನ ಭೂಮಿಯ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳ ಪರಿಶೀಲನೆ ಹಾಗೂ ಜಾಗ ಗುರುತಿಸಲು ತಹಶೀಲ್ದಾರ್‌ ಅಶ್ವಥ್‌ ಅವರಿಗೆ ಸೂಚನೆ ನೀಡಿದರು.

 ನಗರ ಹಾಗೂ ಗ್ರಾಮೀಣ ಭಾಗದ ವಾರ್ಡ್‌ಗಳಲ್ಲಿ ಚರಂಡಿ ವ್ಯವಸ್ಥೆ ಮತ್ತು ಬೀದಿ ದೀಪಗಳ ಸಮಸ್ಯೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇಂದು ಖುದ್ದು ಕೆಲವು ವಾರ್ಡ್‌ ಗಳಿಗೆ ಭೇಟಿ ನೀಡಿ ಸಾರ್ವಜನಿಕ ಸಮಸ್ಯೆಗಳನ್ನು ಆಲಿಸಲಾಗಿದೆ ಎಂದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾದಿಕಾರಿ ರಾಮ್‌ ಬೋವಿ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ (NRLM) ಅಡಿಯಲ್ಲಿ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಸ್ಥಳೀಯವಾಗಿ ಮಹಿಳೆಯರೇ ನಡೆಸುವ ‘ಅಕ್ಕ ಕ್ಯಾಫೆ’, ಎಣ್ಣೆ ಗಾಣ, ಹಪ್ಪಳ-ಸಂಡಿಗೆ ತಯಾರಿಕೆ ಮತ್ತು ಪಶುಸಂಗೋಪನೆಯಂತಹ ಸ್ವಯಂ ಉದ್ಯೋಗಗಳಿಗೆ ತರಬೇತಿ ಹಾಗೂ ಮಾರುಕಟ್ಟೆ ಸೌಲಭ್ಯ ಒದಗಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ (ಬಸವ, ಅಂಬೇಡ್ಕರ್, ದೇವರಾಜ ಅರಸು ಹಾಗೂ ಪ್ರಧಾನಮಂತ್ರಿ ಆವಾಸ್ ಯೋಜನೆ) ಅರ್ಹ ಫಲಾನುಭವಿಗಳನ್ನು ಗ್ರಾಮ ಸಭೆಗಳ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ.

 ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1000 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಈಗಾಗಲೇ ವಿವಿಧ ಹಂತಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.  ವಸತಿ ಯೋಜನೆಯಡಿ ಹಣವು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದ್ದು, ಕಾಮಗಾರಿಯ ಹಂತಗಳನ್ನು ಆ್ಯಪ್ ಮೂಲಕ ಜಿಯೋ-ಟ್ಯಾಗ್ ಮಾಡಲಾಗುತ್ತಿದೆ.  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡಲಾಗುತ್ತಿದೆ. ಜುಲೈ 1 ರಿಂದ ಪ್ರಾರಂಭವಾಗಲಿರುವ ಹೊಸ ಅಭಿಯಾನದ ಮೂಲಕ ಹೆಚ್ಚಿನ ಜನರಿಗೆ ಕೆಲಸ ನೀಡಲು ಯೋಜಿಸಲಾಗಿದೆ ಎಂದು ಸಭೆಗೆ ಮಾಹಿತಿಯನ್ನು ನೀಡಿದರು.

ದಾವಣಗೆರೆ ತಹಶೀಲ್ದಾರ್‌ ಅಶ್ವಥ್‌ ಅವರು ಮಾತನಾಡಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ವಿಧವಾವೇತನ, ಆಹಾರ ಸಂರಕ್ಷಣೆ, ಕಂದಾಯ ಗ್ರಾಮ, ವಿಪತ್ತು ನಿರ್ವಹಣೆ, ಭೂ ಮಂಜೂರಾತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ನಿವಾಸ ಪ್ರಮಾಣ ಪತ್ರ, ಮುಜರಾಯಿ ದೇವಸ್ಥಾನಗಳ ನಿರ್ವಹಣೆ,  ಹೊಸ ಕಂದಾಯ ಗ್ರಾಮಗಳನ್ನು ಗುರುತಿಸುವುದು ಸೇರಿದಂತೆ 74 ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ.

ಭೂ ಸುರಕ್ಷಾ ಯೋಜನೆಯಡಿ 87 ಲಕ್ಷ ಪುಟಗಳನ್ನು ಡಿಜಿಟಲೀಕರಣ ಮಾಡಿ ದಾವಣಗೆರೆ ತಾಲ್ಲೂಕು ರಾಜ್ಯದಲ್ಲಿಯೇ 3 ನೇ ಸ್ಥಾನವನ್ನು ಪಡೆದಿದೆ, ಇದುವರೆವಿಗೂ 53000 ಪುಟಗಳ ಡಿಜಿಟಲ್ ಮಾದರಿ ದಾಖಲೆಗಳನ್ನು ಸಾರ್ವಜನಿಕರು ಪಡೆದಿರುತ್ತಾರೆ ಎಂದು ಸಭೆಗೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಮತ ಹೊಸ ಗೌಡರ್‌ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು (PDO) ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Don't Miss

ದಾವಣಗೆರೆ

Hara: ಪಂಚಮಸಾಲಿ ಪೀಠದಲ್ಲಿ ಹೈಡ್ರಾಮಾ: ವಚನಾನಂದ ಶ್ರೀಗಳ ಉಚ್ಚಾಟನೆ – ಏಪ್ರಿಲ್ 27ಕ್ಕೆ ಬಹಿರಂಗ ಲೆಕ್ಕಕ್ಕೆ ಟ್ರಸ್ಟ್ ಸಿದ್ಧ

ದಾವಣಗೆರೆ:(Hara) ಹರಿಹರದ ಪಂಚಮಸಾಲಿ ಪೀಠದಲ್ಲಿ ಉಂಟಾಗಿರುವ ಭಿನ್ನಮತ ಈಗ ಬಹಿರಂಗ ಸಂಘರ್ಷಕ್ಕೆ ನಾಂದಿ ಹಾಡಿದೆ. ಮಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ ಹಾಗೂ ಟ್ರಸ್ಟಿ ಚಂದ್ರಶೇಖರ್ ಪೂಜಾರ್ ಅವರು ಹರಿಹರ ಪೀಠದ...

ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ...

Related Articles
ಅಪರಾಧದಾವಣಗೆರೆರಾಜ್ಯ / ಕರ್ನಾಟಕ

PSI: ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಪಾನಮತ್ತ ಮಹಿಳೆ.!

ದಾವಣಗೆರೆ: (PSI) ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಪಾನಮತ್ತ ಮಹಿಳೆಯೊಬ್ಬಳು ಹಲ್ಲೆ ನಡೆಸಿ, ಅಸಭ್ಯವಾಗಿ...

ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು...

ದಾವಣಗೆರೆಅಪರಾಧ

Matka: ದಾವಣಗೆರೆ – ಹರಿಹರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಕೆ.ಎಸ್. ಭಗವಾನ್ ಹೇಳಿಕೆ ವಿರುದ್ಧ ಶಾಸಕ ಬಿ.ಪಿ. ಹರೀಶ್ ಕಿಡಿ

ದಾವಣಗೆರೆ:(Matka) ಜಿಲ್ಲೆ ಹಾಗೂ ಹರಿಹರ ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು, ಇತ್ತೀಚೆಗೆ ನಡೆದ ವಿವಾದಾತ್ಮಕ...