ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಉಮಾ ಪ್ರಶಾಂತ್

Davanagere sp uma Prashanth rowdy sheeter parade

ದಾವಣಗೆರೆ: ದಾವಣಗೆರೆ ನಗರದ ಕೆಟಿಜೆ ನಗರ ಠಾಣೆಯ ಆವರಣದಲ್ಲಿ ಎಸ್ ಪಿ ಉಮಾ ಪ್ರಶಾಂತ್ ಕೆಟಿಜೆ ನಗರ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳನ್ನು ಭೇಟಿ ಮಾಡಿದರು.

2024 ರ ಮಾರ್ಚ್ ತಿಂಗಳಿನಲ್ಲಿ ನಗರ ದೇವತೆ ದುರ್ಗಾಂಬಿಕ ಜಾತ್ರೆ ಹಾಗೂ ಲೋಕಸಭಾ ಚುನಾವಣೆ ಪ್ರಯುಕ್ತ ರೌಡಿ ಶೀಟರ್ ಗಳ ಪರೇಡ್ ನಡೆಸಿದರು.

ಇದೇ ವೇಳೆಯಲ್ಲಿ ಎಸ್ ಪಿ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಸೇರಿದಂತೆ ಕಾನೂನು ಸುವ್ಯವಸ್ಥೆಗೆ ತೊಂದರೆ ಬಾರದಂತೆ ಯಾವುದೇ ಅಕ್ರಮ ಚಟುವಟಿಕೆಗಳನ್ನು ನಡೆಸಬಾರದು ಹಾಗೂ ಆ ರೀತಿಯಲ್ಲಿ ಏನಾದರೂ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಎಲ್ಲರೂ ಉತ್ತಮವಾಗಿ ತಮ್ಮ ನಡವಳಿಕೆಯನ್ನು ತೋರಿಸಿಕೊಂಡು ಸನ್ನಡೆತೆಯಲ್ಲಿ ಜೀವನ ಸಾಗಿಸಿ, ಮುಂಬರುವ ಸಮಯದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕನ್ನು ಕಟ್ಟಿಕೊಂಡು ಜೀವನ ನಡೆಸಿ ಎಂದು ಕಿವಿಮಾತು ಹೇಳಿದರು. ಇನ್ನು ಮುಂದೆ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ರೌಡಿ ಶೀಟರ್ ಗಳಿಗೆ ತಿಳಿಸಿದರು..

ದಾವಣಗೆರೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಕೆ ಟಿ ಜೆ ನಗರ ಇನ್ಸ್‌ಪೆಕ್ಟರ್ ಸುನೀಲ್ ಕುಮಾರ್ ಸೇರಿದಂತೆ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!