ಹರಿಹರ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಎಸ್.ಪಿ ಭೇಟಿ

ಹರಿಹರ: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಬುಧವಾರ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರವರಾದ ಸಿ.ಬಿ.ರಿಷ್ಯಂತ್ ಅವರು ಭೇಟಿ ನೀಡಿ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ, ಯಾವುದೇ ತುರ್ತುಸೇವೆಗಾಗಿ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಲು ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗದ ಅಧಿಕಾರಿಗಳಾದ ಶ್ರೀಮತಿ ಮಮತಾ ಹೊಸಗೌಡರ್, ಸಿಪಿಐ ಸತೀಶ್ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.