ಉಚಿತ ಲಸಿಕಾ ಕೇಂದ್ರಗಳಿಗೆ ಎಸ್ ಎಸ್ , ಎಸ್ ಎಸ್ ಎಂ ಭೇಟಿ, ನಾಗರೀಕರ ಯೋಗಕ್ಷೇಮ ವಿಚಾರಿಸಿದ ಶಾಸಕರು

ದಾವಣಗೆರೆ : ದಾವಣಗೆರೆ ದಕ್ಷಿಣ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ದಾವಣಗೆರೆ ನಾಗರೀಕರಿಗಾಗಿ ಹಮ್ಮಿಕೊಂಡಿರುವ ಉಚಿತ ಲಸಿಕಾ ಶಿಬಿರ ಕಾರ್ಯಕ್ರಮದ ಸ್ಥಳಕ್ಕೆ ಬೇಟಿ ನೀಡಿದ್ರು. ಇಂದು 5 ನೇ ದಿನದ ಉಚಿತ ಲಸಿಕಾ ಅಭಿಯಾನ ಸಹ ಮುಂದುವರೆದಿದ್ದು, ಶಿಬಿರದ ಸ್ಥಳಕ್ಕೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರುಗಳು ಗುರುವಾರ ಭೇಟಿ ನೀಡಿ ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ಮನವಿ ಮಾಡಿದರು. ಲಸಿಕೆ ಪಡೆದ ನಾಗರೀಕರ ಯೋಗಕ್ಷೇಮವನ್ನು ವಿಚಾರಿಸಿದರು.

ಇಂದು ದಾವಣಗೆರೆ ನಗರದ ಕೆ.ಆರ್.ರಸ್ತೆಯ ಡಾ|| ಶಾಮನೂರು ಶಿವಶಂಕರಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 9,11,12 ಮತ್ತು 14ನೇ ವಾರ್ಡ್ ನ ಪಾಲಿಕೆ ಸದಸ್ಯ ಜಾಕೀರ್ ಅಲಿ ಮತ್ತು ಮಾಜಿ ಸದಸ್ಯ ಶಫೀಕ್ ಪಂಡಿತ್ ಸೇರಿದಂತೆ ನೂರಾರು ನಾಗರೀಕರು ಲಸಿಕೆ ಪಡೆದರು.

ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರುಗಳ ಸೂಚನೆ ಮೇರೆಗೆ ದಾವಣಗೆರೆಯ ಬಾಪೂಜಿ ಆಸ್ಪತ್ರೆ ಮತ್ತು ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಿಬ್ಬಂದಿ ವರ್ಗದವರು ಲಸಿಕಾ ಶಿಬಿರ ನಡೆಸಿಕೊಟ್ಟರು.
ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆದ ನಾಗರೀಕರಿಗೆ ನೀರು ಮತ್ತು ಬಿಸ್ಕತ್‍ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಆರೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯರುಗಳಾದ ಜಾಕೀರ್ ಅಲಿ, ಸೈಯದ್ ಚಾರ್ಲಿ, ಕೆ.ಚಮನ್ ಸಾಬ್, ಶಫೀಕ್ ಪಂಡಿತ್, ಬುತ್ತಿ ಗೌಸ್, ವಿನಾಯಕ ಪೈಲ್ವಾನ್, ಪಾಮೇನಹಳ್ಳಿ ನಾಗರಾಜ್, ಗಣೇಶ್ ಹುಲ್ಮನಿ, ಮುಖಂಡರುಗಳಾದ ಬುತ್ತಿ ಗಪೂರ್, ಬರ್ಕತ್ ಅಲಿ ಪೈಲ್ವಾನ್, ಲಾಲ್ ಆರೀಪ್, ದಾದಾಪೀರ್, ಸಲೀಂ, ಅನಿಲ್‍ಕುಮಾರ್, ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!