ಅಕ್ರಮವಾಗಿ ವನ್ಯ ಪ್ರಾಣಿಗಳ ಸಾಕಾಣಿಕೆ ಆರೋಪ.! ಎಸ್ ಎಸ್ ಎಂ ಓಡೆತನದ ಕಲ್ಲೇಶ್ವರ ಮಿಲ್ ನಲ್ಲಿ ಅರಣ್ಯ ಅಪರಾಧ ತನಿಖಾ ದಳದಿಂದ ಪರಿಶೀಲನೆ.!

forest vigilance team raided ssm owns rice mill in davanagere

ದಾವಣಗೆರೆ: ಅಕ್ರಮವಾಗಿ ವನ್ಯ ಪ್ರಾಣಿಗಳನ್ನ ಸಾಕಿರುವ ಆರೋಪದ ಹಿನ್ನೆಲೆ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಓಡೆತನದ ಕಲ್ಲೇಶ್ವರ ರೈಸ್ ಮಿಲ್ ಮೇಲೆ ದಾಳಿ ನಡೆದಿದೆ.

ಬೆಂಗಳೂರು, ಬಳ್ಳಾರಿಯ ಅರಣ್ಯ ಅಪರಾಧ ತನಿಖಾ ದಳ ಹಾಗೂ ದಾವಣಗೆರೆ ಅರಣ್ಯ ಇಲಾಖೆಯ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ನಗರದ ಬಂಬೂಬಜಾರ್ ರಸ್ತೆಯಲ್ಲಿರುವ ಕಲ್ಲೆಶ್ವರ ರೈಸ್ ಮಿಲ್ ಆವರಣದಲ್ಲಿ ಜಿಂಕೆ, ಸೇರಿದಂತೆ ಇನ್ನಿತರೆ ವನ್ಯ ಪ್ರಾಣಿಗಳನ್ನ ಸಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಂಟಿ ದಾಳಿ ನಡೆಸಿರುವ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಆದ್ರೆ ಇ ಬಗ್ಗೆ ಇನ್ನೂ ಅಧಿಕಾರಿಗಳು ಅಧಿಕೃತವಾಗಿ ಯಾವುದೇ ಮಾಹಿತಿಯನ್ನ ಹೊರಹಾಕಿಲ್ಲ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಾಧ್ಯಮಗಳಿಗೆ ಯಾವ ಮಾಹಿತಿಯನ್ನ ನೀಡಲಿದ್ದಾರೆ. ತನಿಖೆ ಮುಕ್ತಾಯದ ನಂತರ ಯಾವ ರೀತಿ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!