ದಿಲ್ಲಿಯಲ್ಲಿ ಕಬ್ಬು ಬೆಳೆಗಾರರ ಹೋರಾಟದ ಪ್ರತಿಧ್ವನಿ: ಕೇಂದ್ರದಿಂದ ಸಮಸ್ಯೆಗೆ ಸ್ಪಂಧಿಸುವ ಭರವಸೆ

sugarcane issue will solve central minister hopes

ದೆಹಲಿ: ದೇಶದ ಕಬ್ಬು ಬೆಳೆಗಾರರ ಸಮಸ್ಯೆಗೆ ಗಂಭೀರ ಕ್ರಮ ಕೈಗೊಳುವುದಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೂಮರ್ ಅವರು ವಿವಿಧ ರಾಜ್ಯಗಳ ಸಂಸದರನ್ನೊಳಗೊಂಡ ರೈತ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಕಬ್ಬಿನ ಎಫ್‌ಆರ್‌ಪಿ ದರ ನಿಗದಿ ಮಾಡುವಾಗ ಸಕ್ಕರೆ ಇಳುವರಿ ಆಧಾರದಂತೆ ಹಣ ಪಾವತಿ ದಕ್ಷಿಣ ಭಾರತ ರಾಜ್ಯಗಳ ರೈತರಿಗೆ ಅನ್ಯಾಯವಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 10:25ಕ್ಕೆ ಏರಿಕೆ ಮಾಡಿರುವುದು ಮತ್ತಷ್ಟು ನಷ್ಟ ಅನುಭವಿಸುವಂತಾಗಿದೆ ಕೂಡಲೇ ಸಕ್ಕರೆ ಇಳುವರಿ ಮಾನದಂಡವನ್ನು 8.5ಕ್ಕೆ ಇಳಿಸಬೇಕು ಎಂದು ಈ ನಿಯೋಗವು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿತು.

ಕಬ್ಬು ಬೆಳೆಗಾರರ ಸಂಘದ ರಾಜ್ಯಾದ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಹಲವು ದಿನಗಳಿಂದ ಹೋರಾಟ ನಡೆಯುತ್ತಿದ್ದರೂ ಕರ್ನಾಟಕ ಸರ್ಕಾರ ಸ್ಪಂಧಿಸಿಲ್ಲ. ಈ ಹಿನ್ನೆಲೆಯಲ್ಲಿ ಮಂಡ್ಯಾ ಸಂಸದೆ ಸುಮಲತಾ ಅವರನ್ನೊಳಗೊಂಡ ಸಂಸದರ ನಿಯೋಗದ ಜೊತೆ ಕೇಂದ್ರ ಸಚಿವರನ್ನು‌ ಭೇಟಿ ಮಾಡಿದ ಕುರುಬೂರು ಶಾಂತಕುಮಾರ್, ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನಸೆಳೆದರು.

ಸಂಸದರಾದ ತೆಲಂಗಾಣದ ನಾಮ ನಾಗೇಶ್ವರ ರಾವ್, ತಮಿಳುನಾಡಿನ‌ ಗಣೇಶ ಮೂರ್ತಿ, ಕರ್ನಾಟಕದ ಮತ್ತೊಬ್ಬ ನಾಯಕ ಎಲ್. ಹನುಮಂತಯ್ಯ ಕರ್ನಾಟಕ ರೈತ ಮುಖಂಡರುಗಳಾದ ಪರಶುರಾಮ್ ಎತ್ತಿನಗುಡ್ಡ, ದೈವಸಿಗಾಮಣಿ ಮೊದಲಾದ ಪ್ರಮುಖರು ಈ ನಿಯೋಗದಲ್ಲಿದ್ದರು.

ಈ ಕುರಿತಂತೆ ಮಾಹಿತಿ ಹಂಚಿಕೊಂಡ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಕೇಂದ್ರ ಸಚಿವರು ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರೆಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ 10.25 ಕೆ ಏರಿಕೆ ಮಾಡಿರುವುದರಿಂದ ದಕ್ಷಿಣ ರಾಜ್ಯಗಳ ರೈತರಿಗೆ ಕಡಿಮೆ ಇಳುವರಿ ಇರುವ ಕಾರಣ 325 ರೂ ನಷ್ಟ ಆಗುತ್ತಿದೆ, ಪ್ರಸಕ್ತ ಸಾಲಿನಲ್ಲಿ ಎಫ್‌ಆರ್‌ಪಿ ದರವನ್ನು ಕ್ವಿಂಟಲ್‌ಗೆ 305 ರೂ ನಿಗದಿ ಮಾಡಿರುವುದನ್ನು ಪುನರ್ ಪರಿಶೀಲಿಸಿ 350 ರೂ.ಗೆ ಏರಿಕೆ ಮಾಡಬೇಕು.

ರಸಗೊಬ್ಬರದ ಬೆಲೆ ಎರಿಕೆ, ಕಬ್ಬು ಕಟಾವು, ಸಾಗಾಣಿಕೆ ವೆಚ್ಚ, ಕಬ್ಬಿನ ಬೀಜದ ಬೆಲೆ ಎರಿಕೆಗೆ ಅನುಗುಣವಾಗಿ ಎಫ್‌ಆರ್‌ಪಿ ಏರಿಕೆ ಮಾಡಿಲ್ಲ ಆದ್ದರಿಂದ ಪುನರ್ ಪರಿಶೀಲಿಸಬೇಕು.

ಕಬ್ಬು ಕಟಾವು ಸಾಗಣಿಕೆ 15- 16 ತಿಂಗಳು ಆಗುತ್ತಿರುವ ಕಾರಣ ರೈತನ ಸಾಲದ ಮರುಪಾವತಿ ಅವಧಿ ಸುಸ್ತಿ ಆಗುತ್ತಿದೆ, ಕಬ್ಬಿನ ತೂಕ ಕಡಿಮೆಯಾಗುತ್ತದೆ ಆದಕಾರಣ 12 ತಿಂಗಳ ನಂತರ ವಿಳಂಬದ ಅವಧಿಗೆ ಕಟವ್ ಮಾಡುವ ಕಬ್ಬಿಗೆ ಶೇಕಡ 15 ಬಡ್ಡಿ ಸೇರಿಸಿಕೊಡಲು ಆದೇಶ ಹೊರಡಿಸಿ, ಅಥವಾ ಕಬ್ಬು ಬೆಳೆ ಸಾಲಕ್ಕೆ 20 ತಿಂಗಳ ಮರುಪಾವತಿ ಅವಧಿ ಬಡ್ಡಿ ವಿನಾಯಿತಿ ನೀಡಿ ಅವಕಾಶ ಕಲ್ಪಿಸಬೇಕು.

ಕಬ್ಬಿನ ಸಾಲದ ಕಂತು ಪಾವತಿ ವಿಳಂಬವಾಗುತ್ತಿರುವ ಕಾರಣ ರೈತನಿಗೆ ಸಿಬಿಲ್ ಸ್ಕೋರ್ ನಲ್ಲಿ ಸಾಲ ಸಿಗುತ್ತಿಲ್ಲ, ಆದ್ದರಿಂದ ಕೃಷಿ ಸಾಲ ರೈತರಿಗೆ ನೀಡುವಾಗ ಸಿಬಿಲ್ ಸ್ಕೋರ್ ಮಾನದಂಡ ಕೈಬಿಡಬೇಕು.

ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಪರಿಶೀಲನೆ ವರದಿ ಸಲ್ಲಿಸುವುದು ಕಾರ್ಖಾನೆಗಳೇ ಆಗಿರುವುದರಿಂದ ಇಳುವರಿಯಲ್ಲಿ ಮೋಸ ತೋರಿಸುತ್ತಿದ್ದಾರೆ. ಹಾಗಾಗಿ ರೈತರಿಗಾಗುತ್ತಿರುವ ನಷ್ಟವನ್ನು ತಪ್ಪಿಸಬೇಕು.

ಪ್ರತಿ ರೈತರ ಹೊಲದಲ್ಲಿ ಸಕ್ಕರೆ ಇಳುವರಿ ಪರೀಕ್ಷೆ ಮಾಡಿ ರೈತನ ಸಹಿ ಪಡೆದು ನಂತರ ಕಟಾವು ಮಾಡಿಸುವ ಪದ್ಧತಿ ಜಾರಿಗೆ ತಂದು ರೈತನಿಗೆ ಎಫ್‌ಆರ್‌ಪಿ ಹಣ ಕೊಡಿಸಬೇಕು.

ಸಕ್ಕರೆ ನಿಯಂತ್ರಣ ಕಾಯ್ದೆ 1966ರ ಪ್ರಕಾರ ಕಬ್ಬು ಸರಬರಾಜು ಮಾಡಿದ 14 ದಿನದಲ್ಲಿ ರೈತನಿಗೆ ಹಣ ಪಾವತಿ ಆಗಬೇಕು. ಆದರೆ ಯಾವುದೇ ಕಾರ್ಖಾನೆಗಳು ಪಾಲನೆ ಮಾಡುತ್ತಿಲ್ಲ. ಆದ್ದರಿಂದ ಕಾನೂನು ತಿದ್ದುಪಡಿ ಮಾಡಿ ಈ ಕಾನೂನು ಉಲ್ಲಂಘಿಸುವ ಕಾರ್ಖಾನೆ ಮಾಲೀಕರ ವಿರುದ್ಧ ರೈತರು ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಅಧಿಕಾರ ನೀಡಬೇಕು.

ರೈತರಿಗೆ ಕಬ್ಬು ಹಣ ಪಾವತಿ ವಿಳಂಬದ ಅವಧಿಗೆ ಶೇ.15 ಹೆಚ್ಚುವರಿ ಬಡ್ಡಿ ನಿಡುವಂತಾಗುತ್ತದೆ, ರೈತರಿಗೆ ನಷ್ಟ ತಪ್ಪುತ್ತದೆ.

ಕಬ್ಬಿನ ಎಫ್‌ಆರ್‌ಪಿ ದರವನ್ನು ಹಿಂದಿನ ವರ್ಷ ಕಬ್ಬು ಪೂರೈಕೆ ಮಾಡಿದ ರೈತರ ಸಕ್ಕರೆ ಇಳುವರಿ ಮಾನದಂಡವನ್ನು ಪರಿಗಣಿಸಿ, ಕಬ್ಬು ಪೂರೈಕೆ ಮಾಡಿದ ರೈತರಿಗೆ ಹಣ ಪಾವತಿಸುವುದು ಅವೈಜ್ಞಾನಿಕವಾಗಿದೆ. ಹಾಗಾಗಿ ಎಫ್‌ಆರ್‌ಪಿ ನಿಯಮ ತಿದ್ದುಪಡಿ ಮಾಡಬೇಕು

ಕಬ್ಬಿನ ದರದಲ್ಲಿ ಕಟಾವು ಸಾಗಾಣಿಕೆ ವೆಚ್ಚ ಎಕ್ಸ್ ಗೇಟ್ ಆಗಿರುವ ಕಾರಣ, ಕಾರ್ಖಾನೆಗಳು ರೈತರ ಹಣದಲ್ಲಿ ಕಡಿತ ಮಾಡುವಾಗ ಯಾವುದೇ ಮಾನದಂಡವಿಲ್ಲದೆ ತಮ್ಮ ಮನ ಬಂದಂತೆ ಟನ್ ಕಬ್ಬಿಗೆ 1000 ರೂ ತನಕ ಕಡಿತ ಮಾಡುತ್ತಿದ್ದಾರೆ ಇದರಿಂದ ರೈತರಿಗೆ ನಷ್ಟ ಲಾಗುತ್ತಿದೆ, ಕಟಾವು ಕೂಲಿ ಸಾಗಾಣಿಕೆ ವೆಚ್ಚ ನಿಗದಿ ನಿಯಮ ರೂಪಿಸಿ, ಸುಲಿಗೆ ತಪ್ಪಿಸಲು ಕ್ರಮ ಕೈಗೊಳ್ಳಬೇಕು,

ಈ ಪ್ರಮುಖ ಒತ್ತಾಯಗಳ ಬಗ್ಗೆ ಗಮನಹರಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೂಮರ್ ಅವರು, ಈ ಕುರಿತಂತೆ ಪರಿಶೀಲಿಸಿ ರೈತರಿಗೆ ನ್ಯಾಯಕೊಡಿಸುವ ಭರವಸೆ ನೀಡಿದರು ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.

ಇದೇ ವೇಳೆ, ರಸಗೊಬ್ಬರ ರಾಜ್ಯ ಸಚಿವ ಭಗವಂತ್ ಕೂಬಾ ಅವರನ್ನು ಶಾಸ್ತ್ರಿ ಭವನದ ಕಚೇರಿಯಲ್ಲಿ ಭೇಟಿ ಮಾಡಿದ ಈ ನಿಯೋಗವು ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಮನವಿ ಮಾಡಿತು.

ತೆಲಂಗಾಣದ ನರಸಿಂಹ ನಾಯ್ಡು, ಆಂಧ್ರಪ್ರದೇಶದ
ವೆಂಕಟೇಶ್ವರ ರಾವ್, ಒಡಿಸ್ಸಾದ ಸ್ವಾಸ್ತಿಸುಂದರ್ ಸಿಯಾ, ತಮಿಳುನಾಡಿನ ರಾಮನಗೌಡರ್, ಇಳಂಗೋವನ್  ಬಾಲಸುಬ್ರಹ್ಮಣ್ಯಂ
ಟಿಪಿಕೆ ರಾಜೇಂದ್ರನ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!