davanagere corporation

2 Articles
ದಾವಣಗೆರೆ

Corporation: ಶಿಥಿಲಾವಸ್ಥೆಯಲ್ಲಿರುವ ಅಪಾಯಕಾರಿ ಕಟ್ಟಡಗಳನ್ನು 7 ದಿನಗಳೊಳಗೆ ತೆರವುಗೊಳಿಸಸಲು ಪಾಲಿಕೆ ಆಯುಕ್ತರ ಆದೇಶ

ದಾವಣಗೆರೆ: (Corporation):  ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳಿಂದ ಸಂಭವಿಸಬಹುದಾದ ಮುಂಜಾಗ್ರತಾ ಹಾನಿಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆ ಅಥವಾ ಅಪಾಯಕಾರಿ ಸ್ಥಿತಿಯಲ್ಲಿರುವ ಸಂಪೂರ್ಣ ಕಟ್ಟಡ ಅಥವಾ ಕಟ್ಟಡದ ಭಾಗವನ್ನು ಈ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿತೆರವುಗೊಳಿಸಬೇಕು ಅಥವಾ ರಿಪೇರಿ ಮಾಡಿಕೊಳ್ಳಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆಯನ್ವಯ ಪಾಲಿಕೆ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಸ್ಥಳ ಪರಿಶೀಲನೆ ನಡೆಸಿದಾಗ ಕೆಲವು ಕಟ್ಟಡಗಳು ಸಾರ್ವಜನಿಕರಿಗೆ ಹಾಗೂ ನೆರೆ-ಹೊರೆಯ ಆಸ್ತಿಪಾಸ್ತಿಗಳಿಗೆ ಅಪಾಯವನ್ನುಂಟು ಮಾಡುವ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸದರಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಅಥವಾ ಅದರ ಭಾಗದಿಂದ ಯಾವುದೇ ರೀತಿಯ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿದಲ್ಲಿ ಅದಕ್ಕೆ ಸಂಬಂಧಪಟ್ಟ ಮಾಲೀಕರು ಅಥವಾ ಅನುಭೋಗದಾರರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಆ್ಯಕ್ಟ್ 1976ರ ಸೆಕ್ಷನ್ 322ರ ಅನ್ವಯ, ಮಾಲೀಕರು ತಕ್ಷಣವೇ ಕಟ್ಟಡದ ರಿಪೇರಿ/ತೆರವು ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತೆಯಾಗಿ ಕಟ್ಟಡದ ಸುತ್ತಲೂ ಸುರಕ್ಷತಾ ಬೇಲಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ನಿಗದಿತ 07 ದಿನಗಳ ಅವಧಿಯೊಳಗೆ ಮಾಲೀಕರು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಯಾವುದೇ ಪೂರ್ವಭಾವಿ ನೋಟೀಸ್ ನೀಡದೆ ಪಾಲಿಕೆ ವತಿಯಿಂದಲೇ ಸಂಪೂರ್ಣ ಕಟ್ಟಡ ಅಥವಾ ಅದರ ಭಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟ ಮಾಲೀಕರು/ಅನುಭೋಗದಾರರಿಂದಲೇ ವಸೂಲಿ ಮಾಡಲಾಗುವುದು. ಇಂತಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಒಳಗೆ ಸಾರ್ವಜನಿಕರು ಪ್ರವೇಶಿಸಬಾರದು ಹಾಗೂ ಇಂತಹ ಅಪಾಯಕಾರಿ ಕಟ್ಟಡಗಳ ಸುತ್ತಮುತ್ತ ಸಂಚರಿಸುವಾಗ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಮಹಾಂತೇಶ್‌  ತಿಳಿಸಿದ್ದಾರೆ.

ದಾವಣಗೆರೆ

Samarth: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಾನವನ ಹೆಚ್ಚಿಸಲು ಸಮರ್ಥ್ ಶ್ಯಾಮನೂರು ಮಲ್ಲಿಕಾರ್ಜುನ್ ಸೂಚನೆ

ದಾವಣಗೆರೆ: (Samarth) ದಾವಣಗೆರೆ ದಕ್ಷಿಣ ಕ್ಚೇತ್ರದಲ್ಲಿ ಹೆಚ್ಚು ಉದ್ಯಾನವನಗಳನ್ನು ನಿರ್ಮಿಸುವ ಜೊತೆಗೆ ಜನಪ್ರತಿನಿಧಿಗಳಿಗೆ ಮನವರಿಕೆ ಆಗುವಂತೆ ಕಾಮಗಾರಿಗಳ ವಿವರಣೆ ನೀಡಬೇಕೆಂದು ಅಧಿಕಾರಿಗಳಿಗೆ ಶಾಸಕರಾದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಸೂಚನೆ ನೀಡಿದರು. ಮಹಾನಗರಪಾಲಿಕೆ...

Don't Miss

ದಾವಣಗೆರೆರಾಜಕೀಯರಾಜ್ಯ / ಕರ್ನಾಟಕ

BSY: ಚಿತ್ರದುರ್ಗದಲ್ಲಿ ನಾಳೆ ‘ಬಿಎಸ್ ವೈ ಅಭಿಮಾನೋತ್ಸವ’ದ ಅಬ್ಬರ: ಅಮಿತ್ ಶಾ ಭಾಗಿ, ದಾವಣಗೆರೆಯಿಂದ ಹೊರಟ ಯಡಿಯೂರಪ್ಪ ಕುಟುಂಬ!

ದಾವಣಗೆರೆ/ಚಿತ್ರದುರ್ಗ: (BSY) ಕರ್ನಾಟಕ ರಾಜಕಾರಣದ ಧ್ರುವತಾರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಾರ್ವಜನಿಕ ಜೀವನದ 50 ವರ್ಷಗಳ ಸುವರ್ಣ ಸಂಭ್ರಮದ "ಅಭಿಮಾನೋತ್ಸವ"ಕ್ಕೆ ಕೋಟೆ ನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರ...

ಅಪರಾಧದಾವಣಗೆರೆ

Lokayukta: ದಾವಣಗೆರೆ ಪಾಲಿಕೆ ವಲಯ-1ರ ಮೇಲೆ ಲೋಕಾಯುಕ್ತ ದಾಳಿ: ಫೋನ್-ಪೇ ಮೂಲಕ ಲಂಚದ ಆರೋಪ, ದಾಖಲೆಗಳ ಪರಿಶೀಲನೆ

ದಾವಣಗೆರೆ: (Lokayukta) ಮಹಾನಗರ ಪಾಲಿಕೆ ವಲಯ-1ರ ಕಚೇರಿಯಲ್ಲಿ ನಡೆಯುತ್ತಿದ್ದ ಎನ್ನಲಾದ ಸಾಲು ಸಾಲು ಅಕ್ರಮಗಳ ಕುರಿತು ಬಂದ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆಯಿಂದಲೇ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ...