ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕವಿದೇಶ

Terrorist: ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನ: ಪಾಕ್ ಮೂಲದ ಉಗ್ರ ಸಂಘಟನೆಗೆ ನೇರ ಸಂಪರ್ಕವಿದ್ದ ಉತ್ತರ ಪ್ರದೇಶದ ಸುಹೇಲ್ ಪೋಲೀಸ್ ವಶಕ್ಕೆ

Share
Share

ದಾವಣಗೆರೆ: (Suspected Terrorist) ದಾವಣಗೆರೆ ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ಇಲಾಖೆಯ (ಐಬಿ) ಅಧಿಕಾರಿಗಳು ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಪೇಂಟಿಂಗ್ ಕೆಲಸ ಮಾಡುವ ನೆಪದಲ್ಲಿ ಅಡಗಿ ಕುಳಿತಿದ್ದ ಉತ್ತರ ಪ್ರದೇಶ ಮೂಲದ ಸುಹೇಲ್ ಎಂಬಾತನೇ ಬಂಧಿತ ಶಂಕಿತ ಭಯೋತ್ಪಾದಕ.

*ಬಂಧನದ ಹಿನ್ನೆಲೆ:*
ಇತ್ತೀಚೆಗಷ್ಟೇ ರಾಜ್ಯದ ತುಮಕೂರು ಹಾಗೂ ದಾವಣಗೆರೆ ನಗರದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಲಭ್ಯವಾದ ಮಹತ್ವದ ಸುಳಿವು ಮತ್ತು ಮಾಹಿತಿಯ ಆಧಾರದ ಮೇಲೆ ಸದ್ಯ ಈ ಮೂರನೇ ಶಂಕಿತ ಉಗ್ರ ಸುಹೇಲ್‌ನನ್ನು ಬನ್ನಿಕೋಡು ಗ್ರಾಮದಲ್ಲಿ ಸೆರೆಹಿಡಿಯಲಾಗಿದೆ. ಕಾರ್ಮಿಕನ ಸೋಗಿನಲ್ಲಿ ಹಳ್ಳಿಯೊಂದರಲ್ಲಿ ವಾಸವಿದ್ದ ಈತ, ಪಾಕಿಸ್ತಾನದ ಉಗ್ರಗಾಮಿ ಸಂಘಟನೆಗಳೊಂದಿಗೆ ನಿರಂತರವಾಗಿ ನೇರ ಸಂಪರ್ಕದಲ್ಲಿದ್ದ ಎನ್ನಲಾಗಿದೆ.

*ಜಂಟಿ ಕಾರ್ಯಾಚರಣೆ:*
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶೇಖರ್ ಹೆಚ್.ಟಿ. ಅವರ ನೇರ ಮಾರ್ಗದರ್ಶನದಲ್ಲಿ, ದಾವಣಗೆರೆ ಗ್ರಾಮಾಂತರ ಉಪ ವಿಭಾಗದ ಡಿವೈಎಸ್ಪಿ ಬಸವರಾಜ್, ಕೇಂದ್ರೀಯ ಗುಪ್ತಚರ ವಿಭಾಗದ ಸಿಬ್ಬಂದಿ ಹಾಗೂ ದಾವಣಗೆರೆ ಅಪರಾಧ ವಿಭಾಗದ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಬಂಧನದ ಬಳಿಕ ಮುಂದಿನ ತನಿಖೆಗಾಗಿ ಶಂಕಿತ ಉಗ್ರ ಸುಹೇಲ್‌ನನ್ನು ದಾವಣಗೆರೆ, ತುಮಕೂರು ಮತ್ತು ಕೇಂದ್ರ ಗುಪ್ತಚರ ವಿಭಾಗದ ಪೊಲೀಸರು ಬಿಗಿ ಭದ್ರತೆಯೊಂದಿಗೆ ದಾವಣಗೆರೆಯಿಂದ ತುಮಕೂರು ಜಿಲ್ಲೆಗೆ ಕರೆದೊಯ್ದಿದ್ದಾರೆ. ತನಿಖೆಯ ನಂತರ ಈ ಜಾಲದ ಕುರಿತು ಇನ್ನಷ್ಟು ಆತಂಕಕಾರಿ ವಿಷಯಗಳು ಹೊರಬರುವ ಸಾಧ್ಯತೆಯಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಪರಾಧದಾವಣಗೆರೆ

Canara Bank: ಕೆನರಾ ಬ್ಯಾಂಕ್‌ಗೆ 4.15 ಲಕ್ಷ ರೂ. ದಂಡ ವಿಧಿಸಿದ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗ

ದಾವಣಗೆರೆ: (Canara Bank) ಗೃಹ ಸಾಲದ ಮೂಲ ದಾಖಲೆಗಳನ್ನು ಹಿಂತಿರುಗಿಸುವಲ್ಲಿ ನಿರ್ಲಕ್ಷ್ಯ ತೋರಿದ ಕೆನರಾ ಬ್ಯಾಂಕ್‌ಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಒಟ್ಟು 4,15,000 ರೂ.ಗಳ ಪರಿಹಾರ ಪಾವತಿಸುವಂತೆ ಮಹತ್ವದ ಆದೇಶ ನೀಡಿದೆ. ನಗರದ ಶ್ರೀಮತಿ ಮಂಜುಳಾ ಕೆ.ಬಿ. ಅವರು ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಮನೆಯ ಮೂಲ ದಾಖಲೆಗಳನ್ನು ಅಡಮಾನವಿಟ್ಟು 21,50,000 ರೂ.ಗಳ ಗೃಹ ಸಾಲ ಪಡೆದಿದ್ದರು. 2024 ರ...

ಅಪರಾಧ

Sand: ದಾವಣಗೆರೆಯಲ್ಲಿ ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ: ಗಣಿ ಸಚಿವರ ಆಪ್ತನಿಂದ ಪೊಲೀಸರ ಮೇಲೆ ಒತ್ತಡ.?

ದಾವಣಗೆರೆ:(Sand) ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್...

Related Articles
ಅಪರಾಧದಾವಣಗೆರೆದೇಶರಾಜ್ಯ / ಕರ್ನಾಟಕ

Pocso: ವಚನಾನಂದ ಸ್ವಾಮಿ ಪೋಕ್ಸೊ ಪ್ರಕರಣ: ಹೈಕೋರ್ಟ್ ನಲ್ಲಿ ಪ್ರಕರಣ; ಜೂನ್ 30ಕ್ಕೆ ಆದೇಶ ಮುಂದೂಡಿಕೆ

​ದಾವಣಗೆರೆ: ದಾವಣಗೆರೆ ಸ್ಥಳೀಯ ಪೋಕ್ಸೊ (POCSO) ನ್ಯಾಯಾಲಯದಲ್ಲಿ ಇಂದು ನಿಗದಿಯಾಗಿದ್ದ  ವಚನಾನಂದ ಸ್ವಾಮಿ ಅವರ ಜಾಮೀನು ರದ್ದು...

ದಾವಣಗೆರೆಅಪರಾಧ

Matka: ದಾವಣಗೆರೆ – ಹರಿಹರದಲ್ಲಿ ಅಕ್ರಮ ಚಟುವಟಿಕೆ ಹಾಗೂ ಕೆ.ಎಸ್. ಭಗವಾನ್ ಹೇಳಿಕೆ ವಿರುದ್ಧ ಶಾಸಕ ಬಿ.ಪಿ. ಹರೀಶ್ ಕಿಡಿ

ದಾವಣಗೆರೆ:(Matka) ಜಿಲ್ಲೆ ಹಾಗೂ ಹರಿಹರ ತಾಲೂಕಿನಲ್ಲಿ ಹೆಚ್ಚುತ್ತಿರುವ ಕಾನೂನು ಬಾಹಿರ ಚಟುವಟಿಕೆಗಳು, ಇತ್ತೀಚೆಗೆ ನಡೆದ ವಿವಾದಾತ್ಮಕ...

ಅಪರಾಧರಾಜ್ಯ / ಕರ್ನಾಟಕ

Gambling: ಅಕ್ರಮ ಇಸ್ಪೀಟ್‌, ಓಸಿ ದಂಧೆಗೆ ಪೊಲೀಸರ ಬ್ರೇಕ್: ಜೂಜುಕೋರರ ಹೆಡೆಮುರಿ ಕಟ್ಟಲು ಖಾಕಿ ಪಡೆ ಸಜ್ಜು

ಬೆಂಗಳೂರು: (Gambling)  ರಾಜ್ಯಾದ್ಯಂತ ಅಕ್ರಮ ಇಸ್ಪೀಟ್ (ಅಂದರ್-ಬಾಹರ್) ಮತ್ತು ಓಸಿ (ಒನ್ ಚಾನ್ಸ್/ಮಟ್ಕಾ) ಜೂಜಾಟಗಳ ಹಾವಳಿ...

ದಾವಣಗೆರೆ

Davanagere: ದಾವಣಗೆರೆಯಲ್ಲಿ ಪ್ರಥಮ ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ: ಪೂರ್ವಭಾವಿ ಸಭೆ ಯಶಸ್ವಿ

ದಾವಣಗೆರೆ: (Davanagere) ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಆಯೋಜಿಸಲು ಉದ್ದೇಶಿಸಿರುವ...